ಮಳೆಗೆ ಅಪಾರ್ಟ್​ಮೆಂಟ್ ಕಂಪೌಂಡ್‌ ಗೋಡೆ ಕುಸಿದು ನಾಲ್ವರ ದುರ್ಮರಣ

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್​ಮೆಂಟ್​ ತಡೆಗೋಡೆ ತಡರಾತ್ರಿ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಬಗ್ಗೆ ವರದಿಯಾಗಿದೆ.
ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಕಾಂಪೌಂಡ್​ ಕೂಲಿ ಕಾರ್ಮಿಕರು ಮಲಗಿದ್ದ ಶೆಡ್ ಮೇಲೆಯೇ ಗೋಡೆ ಕುಸಿದು ಬಿದ್ದಿದೆ. ಉತ್ತರ ಭಾರತ ಮೂಲದ 8 ಕಾರ್ಮಿಕರು ಶೆಡ್‌ನಲ್ಲಿ ಮಲಗಿದ್ದರು. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಮನೋಜ್ ಕುಮಾರ್ ಸದಯ್( 35), ರಾಮಕುಮಾರ್ ಸದಯ್ (25), ನಿತೀಶಕುಮಾರ್ ಸದಯ್ (22) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬರ ಹೆಸರು ತಿಳಿದುಬರಬೇಕಿದೆ. ಶೆಡ್​ನಲ್ಲಿದ್ದ ಇನ್ನೂ ನಾಲ್ವರಿಗೆ ಗಾಯಗಳಾಗಿದ್ದು, ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.
ಶೆಡ್ ಪಕ್ಕದಲ್ಲೇ ಹುಡಾನ್ ವೇರ್​ ಹೌಸ್​ನ ತಡೆಗೋಡೆಗೆ ಹೊಂದಿಕೊಂಡಂತೆ ಶೆಡ್​ ನಿರ್ಮಾಣ ಮಾಡಲಾಗಿತ್ತು. ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement