ಶವವಾಗಿ ಪತ್ತೆಯಾದ ತಲಕಳ ಧರ್ಮ ಚಾವಡಿಯ ಸ್ವಾಮೀಜಿ

ಮಂಗಳೂರು: ಶ್ರೀಕೃಷ್ಣ ದೇವಿ ಪ್ರಸಾದ್ ಸ್ವಾಮೀಜಿ (51) ತಮ್ಮ ಆಶ್ರಮ ತಲಕಳ ಧರ್ಮ ಚಾವಡಿಯಲ್ಲಿ ಶುಕ್ರವಾರ (ಜುಲೈ 22) ಶವವಾಗಿ ಪತ್ತೆಯಾಗಿದ್ದಾರೆ.ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಸನ್ಯಾಸ ಸ್ವೀಕರಿಸುವ ಮೊದಲು ಶ್ರೀಕೃಷ್ಣ ದೇವಿ ಪ್ರಸಾದ್ ಸ್ವಾಮೀಜಿ ಮುಂಬೈನಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ಪೂರ್ವಾಶ್ರಮದಲ್ಲಿ ದೇವಿಪ್ರಸಾದ್ ಶೆಟ್ಟಿ ಹೆಸರಿನಿಂದ ಗುರುತಿಸಲ್ಪಟ್ಟಿದ್ದು, ಅವರಿಗೆ ಮದುವೆಯಾಗಿದ್ದು, ಪತ್ನಿ ಹಾಗೂ ಮಗಳಿದ್ದಾಳೆ. ನಂತರ ಅವರು ಲೌಕಿಕ ಭೋಗಗಳನ್ನು ತ್ಯಜಿಸಿ ಸನ್ಯಾಸ ಸ್ವೀಕರಿಸಿ ಕೊಳಂಬೆ ಗ್ರಾಮದ ತಲಕಳ ಕಂದಾವರ ಪಂಚಾಯತ್ ವ್ಯಾಪ್ತಿಯ ಬಳಿ ನಿರ್ಮಿಸಿದ ಆಶ್ರಮದಲ್ಲಿ ವಾಸಿಸುತ್ತಿದ್ದರು.

ಸ್ವಾಮೀಜಿಯವರ ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಪತ್ನಿ ಹಾಗೂ ಅವರ ತಾಯಿ ಧರ್ಮ ಚಾವಡಿ ಅಣತಿ ದೂರದಲ್ಲಿರುವ ಪೂರ್ವಾಶ್ರಮದ ಮನೆಯಲ್ಲಿ ವಾಸವಿದ್ದರು. ಮಗಳು ವಿದೇಶದಲ್ಲಿದ್ದಾರೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement