ಸುಪ್ರೀಂಕೋರ್ಟ್‌ನಿಂದ ಯಡಿಯೂರಪ್ಪಗೆ ರಿಲೀಫ್

ನವದೆಹಲಿ: ಐಟಿ ಕಾರಿಡಾರ್ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಭೂ ಹಂಚಿಕೆ ಹಗರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು.
ಬಿಜೆಪಿಯ ಹಿರಿಯ ನಾಯಕ 2006-07ರಲ್ಲಿ ಅವರು ಕರ್ನಾಟಕದ ಉಪಮುಖ್ಯಮಂತ್ರಿಯಾಗಿದ್ದಾಗಅಕ್ರಮವಾಗಿ ಭೂಮಿಯನ್ನು ಡಿನೋಟಿಫೈ ಮಾಡಿ ಉದ್ಯಮಿಗಳಿಗೆ ಜಮೀನು ಮಂಜೂರು ಮಾಡಿದ ಆರೋಪ ಹೊತ್ತಿದ್ದಾರೆ. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

2020 ರಲ್ಲಿ, ಕರ್ನಾಟಕ ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್‌ಐಆರ್ ಅನ್ನು ರದ್ದುಗೊಳಿಸಬೇಕೆಂಬ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನೆ ಮಾಡಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
2013ರಲ್ಲಿ ವಾಸುದೇವ ರೆಡ್ಡಿ ಎಂಬುವರು ಖಾಸಗಿ ದೂರಿನ ಮೇರೆಗೆ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಮಾಜಿ ಮುಖ್ಯಮಂತ್ರಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ ಐಟಿ ಪಾರ್ಕ್ ಅಭಿವೃದ್ಧಿ ಪಡಿಸಲು ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement