ಪುತ್ರಿಯ ‘ಅಕ್ರಮ ಬಾರ್’ ವಿವಾದ : ಕ್ಷಮೆಯಾಚಿಸಿ ಎಂದು ಕಾಂಗ್ರೆಸ್ ನಾಯಕರಿಗೆ ಲೀಗಲ್ ನೋಟಿಸ್‌ ಕಳುಹಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ತಮ್ಮ 18 ವರ್ಷದ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮೂವರು ಕಾಂಗ್ರೆಸ್ ನಾಯಕರು ಮತ್ತು ಅವರ ಪಕ್ಷದವರಿಗೆ ಇಂದು, ಭಾನುವಾರ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ವಿರೋಧ ಪಕ್ಷದ ಪವನ್ ಖೇರಾ, ಜೈರಾಮ್ ರಮೇಶ್ ಮತ್ತು ನೆಟ್ಟಾ ಡಿಸೋಜಾ ಅವರಿಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ.
ಲಿಖಿತವಾಗಿ ಬೇಷರತ್ ಕ್ಷಮೆಯಾಚಿಸಲು ಮತ್ತು ಕಾಂಗ್ರೆಸ್ ನಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮಗಳ ಮೇಲಿನ ಆರೋಪಗಳನ್ನು ಹಿಂಪಡೆಯುವಂತೆ ಕೇಂದ್ರ ಸಚಿವರು ಕೋರಿದ್ದಾರೆ.
ಸುಳ್ಳು ಆರೋಪಗಳು ನಮ್ಮ ಕಕ್ಷಿದಾರರ ಪ್ರತಿಷ್ಠೆಗೆ ಮತ್ತು ಸಾರ್ವಜನಿಕ ಜೀವನದಲ್ಲಿನ ವ್ಯಕ್ತಿಗೆ ಧಕ್ಕೆ ತರಲು ಉದ್ದೇಶಿಸಲಾಗಿತ್ತು ಮತ್ತು ಅವರ ಮತ್ತು ಅವರ ಮಗಳ ಘನತೆಗೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಕೂಡಿದೆ ಎಂದು ಸಚಿವರ ನೋಟಿಸ್ ಹೇಳಿದೆ.
ಸಚಿವರ ಪುತ್ರಿ ಜೊಯಿಶ್ ಇರಾನಿ ಅವರು ಗೋವಾದಲ್ಲಿ ಬಾರ್ ನಡೆಸುವಲ್ಲಿ ಎಂದಿಗೂ ಭಾಗಿಯಾಗಿಲ್ಲ ಎಂದು ನೋಟಿಸ್ ದೃಢಪಡಿಸಿದೆ.

ಈ ಮಧ್ಯೆ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಇಂದು, ಭಾನುವಾರ ಪಕ್ಷದ ಕಾರ್ಯಕರ್ತರು, ಪೊಲೀಸರ ಸಮ್ಮುಖದಲ್ಲಿ ಗೋವಾದ ರೆಸ್ಟೋರೆಂಟ್‌ನ ಬಾರ್ ಗುರುತನ್ನು ಮರೆಮಾಚುವ ಟೇಪ್ ಅಂಟಿಸಿದ್ದನ್ನು ಅನ್ನು ತೆಗೆದುಹಾಕುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಹೇಳಿಕೆಯೊಂದರಲ್ಲಿ, ಸ್ಮೃತಿ ಇರಾನಿ ಅವರ ಮಗಳ ವಕೀಲರು ತಮ್ಮ ಕಕ್ಷಿದಾರರು ಸಿಲ್ಲಿ ಸೋಲ್ಸ್ ಗೋವಾ ಎಂಬ ರೆಸ್ಟೋರೆಂಟ್ ಮಾಲೀಕರಾಗಲೀ ಅಥವಾ ನಿರ್ವಹಿಸುವವರಾಗಲೀ ಅಲ್ಲ ಮತ್ತು ಯಾವುದೇ ಅಧಿಕಾಯಿಂದ ಯಾವುದೇ ಶೋಕಾಸ್ ನೋಟಿಸ್ ಸ್ವೀಕರಿಸಿಲ್ಲ ಎಂದು ಶನಿವಾರ ಹೇಳಿದ್ದರು.
ಬಾರ್‌ಗೆ ನೀಡಿರುವ ಶೋಕಾಸ್ ನೋಟಿಸ್‌ನ ಪ್ರತಿಯನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ನೋಟಿಸ್ ನೀಡಿದ ಅಬಕಾರಿ ಅಧಿಕಾರಿಯನ್ನು ಅಧಿಕಾರಿಗಳ ಒತ್ತಡದ ನಂತರ ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಿದೆ.
ಪಕ್ಷದ ವಕ್ತಾರ ಪವನ್ ಖೇರಾ ಅವರು, ಬಾರ್‌ಗೆ ಪರವಾನಗಿಯನ್ನು ಒಂದು ವರ್ಷದ ಹಿಂದೆ ಸತ್ತ ವ್ಯಕ್ತಿಯ ಹೆಸರಿನಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement