ಆಂಧ್ರಪ್ರದೇಶದಲ್ಲಿ ರಸ್ತೆ ಅಪಘಾತ: ಬೆಂಗಳೂರಿನ ಪಿಎಸ್‌‌ಐ, ಕಾನ್‌ಸ್ಟೆಬಲ್ ಸೇರಿ ಮೂವರ ಸಾವು

ಬೆಂಗಳೂರು: ಆಂಧ್ರಪ್ರದೇಶದ‌ ಚಿತ್ತೂರು- ತಿರುಪತಿ ರಸ್ತೆಯಲ್ಲಿ‌ ಭೀಕರ ಅಪಘಾತ‌ ಸಂಭವಿಸಿದ್ದು, ಬೆಂಗಳೂರಿನ ಶಿವಾಜಿನಗರ ಠಾಣೆ ಪಿಎಸ್‌ಐ, ಕಾನ್‌ಸ್ಟೆಬಲ್ ಹಾಗೂ ಕಾರಿನ ಚಾಲಕ ಮೃತಪಟ್ಟಿದ್ದಾರೆ.
ಶಿವಾಜಿನಗರದ ಪಿಎಸ್‌ಐ ಆಗಿದ್ದ ಬಸವ ಕಲ್ಯಾಣದ ಅವಿನಾಶ್ (29), ಕಾನ್‌ಸ್ಟೆಬಲ್ ಅನಿಲ್​​ ಮುಲಿಕ್ ಮತ್ತು ಕಾರು ಚಾಲಕ ಮೃತಪಟ್ಟಿದ್ದಾರೆ.
ಪ್ರೊಬೆಷನರಿ ಪಿಎಸ್‌ಐ ದೀಕ್ಷಿತ್​​​, ಕಾನ್ಸ್​ಟೇಬಲ್​​ ಶರಣಬಸವ ಎಂಬುವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಾಜಿನಗರ ಪೊಲೀಸರ ತಂಡ ಗಾಂಜಾ ಮಾರಾಟ ಹಾಗೂ‌ ಸಾಗಣೆ ಆರೋಪಿಗಳ ಬಂಧನಕ್ಕಾಗಿ ಇನ್ನೋವಾ ಕಾರಿನಲ್ಲಿ ಆಂಧ್ರಪ್ರದೇಶಕ್ಕೆ‌ ತೆರಳಿದ್ದ ವೇಳೆ. ಅಪಘಾತ‌ ಸಂಭವಿಸಿದೆ. ಬೆಂಗಳೂರಿನಿಂದ ಶನಿವಾರ ಹೊರಟಿದ್ದ ತಂಡ, ಭಾನುವಾರ ಬೆಳಿಗ್ಗೆ ತಿರುಪತಿ ಕಡೆಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು‌ ಉರುಳಿ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ.ಪೊಲೀಸ್​ ಸಿಬ್ಬಂದಿ ಇದ್ದ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಸುಮಾರು 30 ಅಡಿ ದೂರದ ಮತ್ತೊಂದು ರಸ್ತೆಗೆ ಬಿದ್ದಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement