ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿ ಸರ್ಕಾರದ ಆದೇಶ

ಬೆಂಗಳೂರು: ಒಂದನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು ಸರ್ಕಾರ 5.5 ವರ್ಷಗಳ ಬದಲಾಗಿ ಜೂನ್ 1ಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕೆಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ ಹೊರಡಿಸಿದೆ.
ಈ ಕುರಿತು ನಡಾವಳಿ ಹೊರಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ದಿನಾಂಕ 20-03-2020ರಂದು ಹೊರಡಿಸಿದ್ದಂತ ಆದೇಶವನ್ನು ಹಿಂಪಡೆಯಲಾಗಿದೆ. ಆರ್ ಟಿ ಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ 1ನೇ ದಿನಾಂಕಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ ಎಂದು ಅದರಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಈ ಮೊದಲು ಎಲ್ ಕೆಜಿ, ಯುಕೆಜಿ ಬಳಿಕ ಒಂದನೇ ತರಗತಿಗಾಗಿ ಶಾಲೆಗೆ ದಾಖಲಾಗುವುದಕ್ಕೆ ಶೈಕ್ಷಣಿಕ ವರ್ಷ ಜೂನ್ 01ರಂದು ಕನಿಷ್ಠ 5.5 ವರ್ಷ ಆಗುವುದು ಕಡ್ಡಾಯವಾಗಿತ್ತು. ಈಗ ಈ ವಯೋಮಿತಿಯನ್ನು ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಒಂದನೇ ತರಗತಿಗೆ ದಾಖಲಾಗಲು ಮಗುವಿನ ವಯಸ್ಸು ಕಡ್ಡಾಯವಾಗಿ 6 ವರ್ಷ ಆಗಬೇಕಾಗುತ್ತದೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿ ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 2016-17ನೇ ಶೈಕ್ಷಣಿಕ ಸಾಲಿನಿಂದ ಆರ್.ಟಿ.ಇ ಕಾಯ್ದೆ ಅಡಿಯಲ್ಲಿ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಸಂಸ್ಥೆಗಳ ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ ಸಂಬಂಧಿಸಿದಂತೆ ಎಲ್.ಕೆ.ಜಿ ತರಗತಿಗೆ 3 ವರ್ಷ 10 ತಿಂಗಳಿನಿಂದ 4 ವರ್ಷ 10 ತಿಂಗಳು ಆಗಿರಬೇಕು. 1ನೇ ತರಗತಿಗೆ ಮಕ್ಕಳನ್ನು ಸೇರಿಸಲು ಕನಿಷ್ಠ 6ವರ್ಷ ಆಗಿರಬೇಕು, ಗರಿಷ್ಠ 7 ವರ್ಷ ವಯೋಮಿತಿಯನ್ನು ನಿಗದಿಪಡಿಸಿ ನೂತನ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪೂರ್ವ ಪ್ರಾಥಮಿಕ ( ಎಲ್.ಕೆ.ಜಿ ) ಹಾಗೂ ಪ್ರಾಥಮಿಕ ಶಾಲೆಯ 1ನೇ ತರಗತಿ ಮಕ್ಕಳನ್ನು ದಾಖಲಾತಿ ಮಾಡಲು ಕರ್ನಾಟಕ ಶಿಕ್ಷಣ ಕಾಯ್ದೆ – 1983ರ ನಿಯಮ -20 ರನ್ವಯ ಆಯಾ ಶೈಕ್ಷಣಿಕ ವರ್ಷದ ಜೂ.1 ಕ್ಕೆ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ ) 3 ವರ್ಷ 10 ತಿಂಗಳು, 1 ನೇ ತರಗತಿಗೆ 5 ವರ್ಷ 10 ತಿಂಗಳು ಎಂಬುದಾಗಿ 2017 ರ ಜ.13ರಲ್ಲಿ ವಯೋಮಿತಿ ನಿಗದಿಪಡಿಸಲಾಗಿತ್ತು. ಅದೇ ತಿಂಗಳ 18 ರಂದು ಆದೇಶವನ್ನು ಮಾರ್ಪಡಿಸಿ ಶೈಕ್ಷಣಿಕ ವರ್ಷ 2018-19ನೇ ಸಾಲಿನಿಂದ ಸರ್ಕಾರಿ, ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ನೇರವಾಗಿ ದಾಖಲಾಗುವ ಮಗುವು ಸಂಬಂಧಿಸಿದ ಶೈಕ್ಷಣಿಕ ವರ್ಷದ ಜೂನ್ 1 ರಂದು 5 ವರ್ಷ, 10 ತಿಂಗಳು ಪೂರ್ಣಗೊಂಡಿರಬೇಕೆಂದು ನಿಗದಿಪಡಿಸಿದ್ದರು. 2009ರಲ್ಲಿ ಆರ್.ಟಿ.ಇ. ಕಾಯ್ದೆ ಮತ್ತು 2012 ರಲ್ಲಿ ಕಡ್ಡಾಯ ಶಿಕ್ಷಣ ನಿಯಮಗಳು ಜಾರಿಗೆ ಬಂದಿವೆ. ಇವುಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983 ಮತ್ತು ಅದರಡಿ ರಚಿತವಾದ ಎಲ್ಲಾ ನಿಯಮಗಳನ್ನು / ಆದೇಶಗಳನ್ನು ರದ್ದುಪಡಿಸಿ, ಈ ಹೊಸ ಆದೇಶ ನೀಡಲಾಗಿದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement