ಛತ್ತೀಸ್‌ಗಡ : 19 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಕ್ಸಲನ ಹತ್ಯೆ ಮಾಡಿದ ಪೊಲೀಸರು

ದಾಂತೇವಾಡ: ಛತ್ತೀಸ್‍ಘಢದ ದಾಂತೇವಾಡ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 19 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲೀಯ ಹತ್ಯೆಯಾಗಿದ್ದಾನೆ.
ಕಾನೂನುಬಾಹಿರ ಚಳವಳಿಯ ಕಟೆಕಲ್ಯಾಣ ಪ್ರದೇಶ ಸಮಿತಿಯ ಸದಸ್ಯ ಬುಧ್ರಾಮ್ ಮರ್ಕಮ್ ಹತ್ಯೆಯಾಗಿದ್ದು, ಈತನ ಸುಳಿವು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಕಾಡಿನಲ್ಲಿ ಸೋಮವಾರ ಮಧ್ಯರಾತ್ರಿ ಬಂಡುಕೋರರು ಮತ್ತು ಜಿಲ್ಲಾ ಮೀಸಲು ಪಡೆ ಮುಖಾಮುಖಿಯಾಗಿದೆ. ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದಾಗ, ಪ್ರತಿದಾಳಿಗೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡು ಹಾರಿಸಿದ ನಕ್ಸಲೀಯರು ಕತ್ತಲೆಯ ಲಾಭ ಪಡೆದು ಕಾಡಿಗೆ ಓಡಿಹೋಗಿದ್ದರು. ಹುಡುಕಾಟದ ಸಮಯದಲ್ಲಿ ಭದ್ರತಾ ಸಿಬ್ಬಂದಿ ಗುಂಡಿನಿಂದ ನಕ್ಸಲೀಯನ ಸಾವಿಗೀಡಾಗಿದ್ದಾನೆ. ಹತ್ಯೆಯಾದ ಮಾರ್ಕಮ್ ವಿರುದ್ಧ 19 ಕ್ರಿಮಿನಲ್ ಪ್ರಕರಣಗಳು ದಾಖಲಾಗಿತ್ತು ಎಂದು ಹೇಳಲಾಗಿದೆ. ಎಲ್ಲಾ ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದು, ನಕ್ಸಲೀಯರ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್‌ ನಾಯಕ ಅಧೀರ್‌ ಹೇಳಿಕೆ ತಿರಸ್ಕರಿಸಿದ ನಂತರ ಪಶ್ಚಿಮ ಬಂಗಾಳ ಕಾಂಗ್ರೆಸ್ ಕಚೇರಿ ಮುಂದಿನ ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳಿಗೆ ಮಸಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement