ಮಂಗಳೂರು: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೇ ಬಂದ್ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಈ ಆದೇಶದ ಇಂದು, ಶುಕ್ರವಾರ ಸಂಜೆ (ಜು.29) ರಿಂದ ಆಗಸ್ಟ್ 1ರ ವರೆಗೆ ಜಾರಿಯಲ್ಲಿರುತ್ತದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದ್ದು, ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯ ವರೆಗೆ ಅಂಗಡಿ ಮುಂಗಟ್ಟು ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದರ ಅನುಷ್ಠಾನದ ಹೊಣೆಗಾರಿಕೆಯನ್ನು ಜಿಲ್ಲೆಯ ಸ್ಥಳೀಡಾಡಳಿತಗಳು ಹಾಗೂ ಗ್ರಾಮ ಪಂಚಾಯತಕ್ಕೆ ನೀಡಲಾಗಿದೆ. ಆಸ್ಪತ್ರೆ, ಔಷಧ ಅಂಗಡಿಗಳು ಸೇರಿದಂತೆ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ