ರಾಜ್ಯದಲ್ಲಿ ಇಂದು ಎರಡು ಸಾವಿರದ ಗಡಿ ದಾಟಿದ ದೈನಂದಿನ ಕೊರೊನಾ ಪ್ರಕರಣ, ನಾಲ್ಕು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇಂದು ಶುಕ್ರವಾರ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಬೆಂಗಳೂರು ನಗರದಲ್ಲೇ 1,615 ಪ್ರಕರಣಗಳು ದಾಖಲಾಗಿದೆ.
ರಾಜ್ಯದಲ್ಲಿಂದು 2,130 ಹೊಸ ಪ್ರಕರಣಗಳು ದಾಖಲಾಗಿದ್ದು, ನಾಲ್ವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನಿನ್ನೆ 1,800 ಪ್ರಕರಣಗಳು ದಾಖಲಾಗಿತ್ತು. ರಾಜ್ಯದಲ್ಲಿ 1,395 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.6.51 ಇದೆ. ರಾಜ್ಯದಲ್ಲಿ 9,866 ಸಕ್ರಿಯ ಪ್ರಕರಣಗಳಿವೆ.
ಇಂದು 32,685 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಹಾಗೂ 95,524 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.

ಜಿಲ್ಲಾವಾರು ಮಾಹಿತಿ

ಬೆಂಗಳೂರು ನಗರದಲ್ಲೇ 1,615, ಬೆಂಗಳೂರು ಗ್ರಾಮಾಂತರ-6, ಬಾಗಲಕೋಟೆ -15, ಬಳ್ಳಾರಿ -27, ಬೆಳಗಾವಿ -34, ಬೀದರ್ -13, ಚಾಮರಾಜನಗರ -7, ಚಿಕ್ಕಬಳ್ಳಾಪುರ -15, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ತಲಾ ಒಂದೊಂದು ಪ್ರಕರಣ, ದಕ್ಷಿಣ ಕನ್ನಡ -20, ದಾವಣಗೆರೆ -6, ಧಾರವಾಡ -70, ಗದಗ -1, ಹಾಸನ -40, ಹಾವೇರಿ -8, ಕಲಬುರಗಿ -33, ಕೊಡಗು -47, ಕೋಲಾರ -18, ಕೊಪ್ಪಳ -3, ಮಂಡ್ಯ -22, ಮೈಸೂರು -51, ರಾಯಚೂರು -6, ರಾಮನಗರ -3, ಶಿವಮೊಗ್ಗ -12, ತುಮಕೂರು -41, ಉಡುಪಿ -7, ಉತ್ತರ ಕನ್ನಡ -6, ವಿಜಯಪುರ -2 ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement