ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಆನಂದ ಸಿಂಗ್‌ ನೇಮಕ ಮಾಡಿದ್ದ ಆದೇಶ ಏಕಾಏಕಿ ರದ್ದು..!

ಬೆಂಗಳೂರು: ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಈಗ ಅದನ್ನು ರದ್ದುಪಡಿಸಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶಶಿಕಲಾ ಜೊಲ್ಲೆ ಅವರನ್ನು ಕೊಪ್ಪಳ ಜಿಲ್ಲೆಗೆ ನೇಮಕ ಮಾಡಿ ಶನಿವಾರ ಬೆಳಿಗ್ಗೆ ಸರ್ಕಾರ ಆದೇಶ ಹೊರಡಿಸಿತ್ತು.

ಆದರೆ ಸಂಜೆ ಆ ಆದೇಶವನ್ನು ದಿಢೀರ್‌ ಆಗಿ ರದ್ದು ಮಾಡಿದೆ. ಇದೇ ರೀತಿ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲೆಗೆ, ವಿಜಯ ನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಶಶಿಕಲಾ ಜೊಲ್ಲೆ ಅವರನ್ನು ಕೊಪ್ಪಳ ಜಿಲ್ಲೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ಏಕಾಏಕಿ ಆದೇಶವನ್ನು ರದ್ದು ಮಾಡಲಾಗಿದ್ದು ಯಥಾಸ್ಥಿತಿಯಲ್ಲಿ ಉಸ್ತುವಾರಿ ಸಚಿವರಾಗಿ ಮುಂದುವರೆಯಲಿದ್ದಾರೆ ಎಂದು ಮರು ಆದೇಶದಲ್ಲಿ ಹೇಳಲಾಗಿದೆ.
ತವರು ಜಿಲ್ಲೆ ವಿಜಯ ನಗರದ ಉಸ್ತುವಾರಿ ನೀಡಬೇಕು ಎಂದು ಆನಂದ್ ಸಿಂಗ್ ಪಟ್ಟು ಹಿಡಿದಿದ್ದರು ಎಂದು ಹೇಳಲಾಗಿತ್ತು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement