ತಾಳಗುಪ್ಪ : ಖಾಸಗಿ ಬಸ್ – ಕಾರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಚಾಲಕ ಸಾವು, 6 ಮಂದಿಗೆ ಗಾಯ

ತಾಳಗುಪ್ಪ : ಮಾರುತಿ ಇಕೋ ಕಾರು ಮತ್ತು ಹಾಗೂ ಪ್ರವಾಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಆಲಳ್ಳಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಜೋಗದಿಂದ ಸಾಗರದ ಕಡೆ ಬರುತ್ತಿದ್ದ ಕಾರು ಪ್ರವಾಸಿ ಬಸ್ಸಿಗೆ ಗುದ್ದಿ ಮತ್ತೆ ಜೋಗದತ್ತ‌ ಪುನಃ ಮುಖ ತಿರುಗಿಸಿ ನಿಂತಿದೆ.

ಮೃತ ವ್ಯಕ್ತಿಯನ್ನು ಚನ್ನಗಿರಿಯ ಶಾಭಾಜ್(23) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ರಿಹಾನ್(14), ತಬಸ್ಸುಮ್(23), ಶಿಫಾ(27), ಖಮರುನ್ನಿಸಾ(45), ಜಬ್ರುನ್(55), ಮಹಮ್ಮದ್ ಉಸ್ಮಾನ್(25) ಸೇರಿ ಎಲ್ಲ ಆರು ಮಂದಿಗೂ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಇವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ,ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಜೋಗ ಜಲಪಾತ ವೀಕ್ಷಿಸಿ ವಾಪಸ್ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement