ಕಾರವಾರ: ಎನ್ಐಎ ಅಧಿಕಾರಿಗಳು ಭಟ್ಕಳ ( ಮತ್ತು ತುಮಕೂರಿನಲ್ಲಿ ವಶಕ್ಕೆ ಪಡೆದಿದ್ದ ಶಂಕಿತರನ್ನು ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಭಟ್ಕಳದ ಅಬ್ದುಲ್ ಮುಖ್ತದೀರ್ (30) ಹಾಗೂ ತುಮಕೂರಿನ ಶಂಕಿತನನ್ನು ಬಿಡುಗಡೆ ಮಾಡಿದ್ದಾರೆ. ಹೆಚ್ಚಿನ ವಿಚಾರಣೆಗೆ ದೆಹಲಿಗೆ ಬರುವಂತೆ ಎನ್ಐಎ ನೋಟಿಸ್ ನೀಡಿದ್ದಾರೆ.
ಅಬ್ದುಲ್ ಮುಖ್ತದೀರ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮುಖ್ಯರಸ್ತೆ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿದ್ದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಆರೋಪದಡಿ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಭಾನುವಾರ (ಜುಲೈ 31) ಬೆಳಗ್ಗೆ 4.15ರ ಸುಮಾರಿಗೆ ಆರೋಪಿಯನ್ನು ಬಂಧಿಸಿ ಕರೆದೊಯ್ದಿದ್ದರು. ಅಬ್ದುಲ್ನಿಂದ ಮೊಬೈಲ್ಫೋನ್ ಡೇಟಾ, ಇತರೆ ದಾಖಲೆಗಳನ್ನು ಎನ್ಐಎ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ರಹಸ್ಯ ಸ್ಥಳದಲ್ಲಿ ಶಂಕಿತ ಮತ್ತು ಆತನ ಸೋದರನನ್ನು ವಿಚಾರಣೆ ನಡೆಸಿದ್ದರು ಎಂದು ಹೇಳಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ