ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಗುಡ್ಡವೊಂದು ಮನೆಯ ಮೇಲೇ ಕುಸಿದು, ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ, ಸಾವಿಗೀಡಾದ ದುರಂತ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಬ್ರಹ್ಮಣ್ಯ ಕುಮಾರಧಾರದ ಸ್ನಾನಘಟ್ಟದ ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾಾರಿಯ ಪರ್ವತಮುಖಿ ಎಂಬಲ್ಲಿ ದುರಂತ ಸಂಭವಿಸಿದ್ದು, ಕುಸುಮಾಧರ – ರೂಪಾಶ್ರೀ ದಂಪತಿಯ ಮಕ್ಕಳಾದ ಶ್ರುತಿ (11), ಗಾನ (6) ಎಂಬ ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಗುಡ್ಡ ಕುಸಿತದಿಂದ ಮನೆ ನೆಲಸಮವಾದ ಕಾರಣ ಅದರ ಅಡಿ ಅವರು ಸಿಲುಕಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯಾಡಳಿತದವರು ದೌಡಾಯಿಸಿದ್ದು, ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ, ಮಕ್ಕಳನ್ನು ರಕ್ಷಿಸುವ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕುಮಾರಧಾರಾ ಸ್ನಾನಘಟ್ಟದ ಸಮೀಪವೇ ಇವರ ಮನೆ ಇದ್ದು, ಮನೆಯಿಂದ 100 ಮೀಟರ್ ದೂರದಲ್ಲಿ ಕುಸುಮಾಧರ ಅವರಿಗೆ ಅಂಗಡಿ ಇದೆ. ದಂಪತಿಗೆ ಮೂವರು ಮಕ್ಕಳಿದ್ದು, ದುರಂತ ಸಂಭವಿಸುವ ಸ್ವಲ್ಪ ಮೊದಲು ತಾಯಿ ರೂಪಶ್ರೀ ತನ್ನ ಕಿರಿಯ ಮಗುವಿನೊಂದಿಗೆ ಮನೆಯಿಂದ ಹೊರಗೆ ಹೋಗಿದ್ದರು. ಭಾರಿ ಮಳೆ ಹಿನ್ನೆಲೆಯಲ್ಲಿ ಮಕ್ಕಳನ್ನು ಎಚ್ಚರಿಸಲೆಂದು ತಂದೆ ಮನೆಗೆ ಬರುವ ವೇಳೆಗೆ ಗುಡ್ಡ ಕುಸಿತು ಮನೆ ಸಂಪೂರ್ಣ ನೆಲಸಮಗೊಂಡು ಅದರಡಿ ಮಕ್ಕಳು ಸಿಲುಕಿದ್ದರು. ಮಕ್ಕಳ ಮೃತದೇಹವನ್ನು ರಕ್ಷಣಾ ತಂಡ ಹೊರ ತೆಗೆದಿದೆ ಎಂದು ವರದಿಗಳು ತಿಳಿಸಿವೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ