ಪ್ರವೀಣ ಹಂತಕರ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಬಂಧಿಸ್ತೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಪ್ರವೀಣ್ ಬೆಳ್ಳಾರೆ ಹತ್ಯೆ ಪ್ರಕರಣದಲ್ಲಿ ಹಂತಕರ ಸುಳಿವು ಸಿಕ್ಕಿದೆ. ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ ಹತ್ಯೆ ಪ್ರಕರಣದ ಸಂಬಂಧ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಇವರ ಮೇಲೆ ಕೃತ್ಯಕ್ಕೆ ಸಹಾಯ ಮಾಡಿದ ಆರೋಪವಿದೆ ಮತ್ತೆ ಅನೇಕರನ್ನು ವಶಕ್ಕೆ ಪಡೆದು ವಿಚಾರ ಮಾಡಲಾಗುತ್ತಿದೆ. ಹತ್ಯೆಯ ಪ್ರಮುಖ ಆರೋಪಿಗಳ ಸುಳಿವು ಸಿಕ್ಕಿದೆ. ಶೀಘ್ರದಲ್ಲಿಯೇ ಅವರನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು.

ಈ ಪ್ರಕರಣ ತನಿಖಾ ಹಂತದಲ್ಲಿ ಇರುವುದರಿಂದ ಹೆಚ್ಚಿನ ಮಾಹಿತಿ ಹೇಳಲು ಸಾಧ್ಯವಿಲ್ಲ. ಆದರೆ ಪ್ರಕರಣದಲ್ಲಿ ಅಮಾಯಕರನ್ನು ಬಂಧನ ಮಾಡಿಲ್ಲ. ಕೃತ್ಯಕ್ಕೆ ಸಹಾಯ ಮಾಡಿದವರ ಬಂಧನ ಈಗ ಆಗಿದೆ ಎಂದು ಸ್ಪಷ್ಟಪಡಿಸಿದರು.
ಫಾಜಿಲ್ ಪ್ರಕರಣದಲ್ಲಿಯೂ ಹಲವಾರು ಆರೋಪಿಗಳ ಬಂಧನವಾಗಿದೆ, ತನಿಖೆ ನಡೆಯುತ್ತಿದೆ. ಕೃತ್ಯದಲ್ಲಿ ಪಾಲ್ಗೊಂಡ ಯಾರನ್ನೂ ಬಿಡುವ ಪ್ರಶ್ನೆಯಿಲ್ಲ. ಪೊಲೀಸರು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement