ರಾಜ್ಯದ 5 ಜಿಲ್ಲೆಗಳಿಗೆ ಮೂರು ದಿನ ‘ರೆಡ್‌ ಅಲರ್ಟ್’: ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆಭಾರಿ ಮಳೆ ಮುಂದುವರೆಯಲಿದ್ದು,ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್‌ ಅಲರ್ಟ್’ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳ ಕಾಲ ‘ರೆಡ್ ಅಲರ್ಟ್’ ನೀಡಲಾಗಿದೆ. ಶಿವಮೊಗ್ಗಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಬೀದರ್, ಕಲಬುರ್ಗಿ ಸೇರಿದಂತೆ 10 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ,ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಹಾಗೂ ರಾಮನಗರ ಜಿಲ್ಲೆಯಲ್ಲಿ ಒಂದೆರಡು ಕಡೆ ಇಂದು, ಗುರುವಾರ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಸಮುದ್ರ ತೀರದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 50ರಿಂದ 60 ಕಿ.ಮೀ. ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement