ಹಾವು ಕಚ್ಚಿ ಮೃತಪಟ್ಟ ಸಹೋದರನ ಅಂತ್ಯಕ್ರಿಯೆಗೆ ಬಂದ ತಮ್ಮನೂ ಹಾವು ಕಡಿತದಿಂದ ಸಾವಿಗೀಡಾದ…!

ಬಲರಾಂಪುರ: ಉತ್ತರಪ್ರದೇಶ ಹಾವು ಕಡಿತದಿಂದ ಮೃತಪಟ್ಟ ತನ್ನ ಸಹೋದರನ  ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ವ್ಯಕ್ತಿಯೊಬ್ಬರು ನಿದ್ದೆಯಲ್ಲಿದ್ದಾಗ ಹಾವು ಕಚ್ಚಿ ಸಾವಿಗೀಡಾದ ಘಟನೆ ನಡೆದಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಗೋವಿಂದ್ ಮಿಶ್ರಾ (22) ಉತ್ತರ ಪ್ರದೇಶದ ಭವಾನಿಪುರ ಗ್ರಾಮದಲ್ಲಿ ಬುಧವಾರ ನಡೆದ ತನ್ನ ಸಹೋದರ ಅರವಿಂದ್ ಮಿಶ್ರಾ (38) ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು ಎಂದು ಪೊಲೀಸ್‌ ಅಧಿಕಾರಿ ರಾಧಾ ರಮಣ್ ಸಿಂಗ್ ತಿಳಿಸಿದ್ದಾರೆ. ಮಂಗಳವಾರ ಹಾವು ಕಡಿತದಿಂದ ಸಹೋದರ ಮೃತಪಟ್ಟಿದ್ದ.

ಗೋವಿಂದ್ ಮಿಶ್ರಾ ಅವರು ನಿದ್ರೆಯಲ್ಲಿದ್ದಾಗ ಹಾವು ಕಚ್ಚಿ ಮೃತಪಟ್ಟಿದ್ದಾರೆ, ಅದೇ ಮನೆಯಲ್ಲಿದ್ದ ಕುಟುಂಬದ ಸಂಬಂಧಿಗಳಲ್ಲಿ ಒಬ್ಬರಾದ ಚಂದ್ರಶೇಖರ್ ಪಾಂಡೆ (22) ಅವರಿಗೂ ಹಾವು ಕಚ್ಚಿದೆ. ಪಾಂಡೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅವರ ಸ್ಥಿತಿ ಗಂಭೀರವಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.
ಗೋವಿಂದ ಮಿಶ್ರಾ ಮತ್ತು ಚಂದ್ರಶೇಖರ್ ಪಾಂಡೆ ಇಬ್ಬರೂ ಅರವಿಂದ ಮಿಶ್ರಾ ಅವರ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಲುಧಿಯಾನದಿಂದ ಗ್ರಾಮಕ್ಕೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ವೈದ್ಯಕೀಯ ಮತ್ತು ಆಡಳಿತ ಅಧಿಕಾರಿಗಳು ಗುರುವಾರ ಗ್ರಾಮಕ್ಕೆ ಭೇಟಿ ನೀಡಿದರು. ಸ್ಥಳೀಯ ಶಾಸಕ ಕೈಲಾಶ್ ನಾಥ್ ಶುಕ್ಲಾ ಅವರು ದುಃಖತಪ್ತ ಕುಟುಂಬವನ್ನು ಭೇಟಿಯಾಗಿ ಅವರಿಗೆ ಸಹಾಯ ಮಾಡುವ ಭರವಸೆ ನೀಡಿದರು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶುಕ್ಲಾ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement