ಕಾರಿನ ಮೇಲೆ ಉರುಳಿ ಬಿದ್ದ ಮರ: ತಂದೆ-ಮಗ ಸ್ಥಳದಲ್ಲೇ ಸಾವು

ಚಾಮರಾಜನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಸಮೀಪ ಹೆಗ್ಗವಾಡಿ ಕ್ರಾಸ್ ಬಳಿ ಘಟನೆ ನಡೆದಿದೆ.
ಕುದೇರು ರಸ್ತೆಯಲ್ಲಿ ಚಲಿಸುತ್ತಿದ್ದ ಮಾರುತಿ ಒಮ್ನಿ ಕಾರಿನ ಮೇಲೆ ಹಳೆಯ ಮರ ಉರುಳಿ ಬಿದ್ದಿದೆ. ಮೃತರನ್ನು ಹೊನ್ನೂರಿನ ಹೆಚ್.ಬಿ. ರಾಜು(49) ಮತ್ತು ಅವರ ಪುತ್ರ ಶರತ್(22) ಎಂದು ಗುರುತಿಸಲಾಗಿದೆ. ರಾಜು ಯಳಂದೂರಿನಲ್ಲಿ ಹೋಲ್​ಸೇಲ್​ ಅಂಗಡಿ ನಡೆಸುತ್ತಿದ್ದರು.

ಶುಕ್ರವಾರ ಸಂಜೆ ೬ರ ಸುಮಾರಿಗೆ ಸಂತೇಮರಹಳ್ಳಿಯಿಂದ ಕುದೇರಿಯತ್ತ ಅವರು ಹೊರಟಿದ್ದರು ಎಂದು ಹೇಳಲಾಗಿದೆ. ಕಳೆದೆರಡು ದಿನದಿಂದ ಒಂದೇ ಸಮನೆ ಮಳೆಯಾಗುತ್ತಿದ್ದು ಮರ ನೀರಿಗೆ ನೆನೆದಿದ್ದರಿಂದ ಅದು ಬಿದ್ದಿದೆ. ಬಿದ್ದ ರಭಸಕ್ಕೆ ಕಾರು ನುಜ್ಜು-ಗುಜ್ಜಾಗಿದ್ದು ಅದರಡಿ ಸಿಲು ಮೃತಪಟ್ಟಿದ್ದಾರೆ. ಸಂತೇಮರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement