ಉಪರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ ಜಗದೀಪ್ ಧನಕರ್‌ಗೆ ಸುಲಭದ ಗೆಲುವು ಸಾಧ್ಯತೆ

ನವದೆಹಲಿ: ಭಾರತದ ಉಪರಾಷ್ಟ್ರಪತಿ ಆಯ್ಕೆಗೆ ಇಂದು, ಶನಿವಾರ ಚುನಾವಣೆ ನಡೆಯುತ್ತಿದ್ದು, ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಬಿಜೆಪಿ ಬೆಂಬಲದೊಂದಿಗೆ ಜಯಭೇರಿ ಬಾರಿಸುವ ನಿರೀಕ್ಷೆಯಿದೆ. ಪ್ರತಿಪಕ್ಷದ ಮಾರ್ಗರೆಟ್ ಆಳ್ವಾ ಅವರು ಪ್ರತಿಪಕ್ಷಗಳ ಅಭ್ಯರ್ಥಿಯಾಗಿದ್ದಾರೆ.
ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದೆ. ಸಂಜೆಯ ನಂತರ ಫಲಿತಾಂಶ ಬರುವ ಸಾಧ್ಯತೆ ಇದೆ. ಮತಗಟ್ಟೆ ತೆರೆಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮತ ಚಲಾಯಿಸಿದರು.
ಜಗದೀಪ್ ಧನಕರ್‌ ಅವರು 527 ಮತಗಳನ್ನು ನಿರೀಕ್ಷಿಸಬಹುದು, ಇದು ಅವರು ಗೆಲ್ಲಲು ಅಗತ್ಯವಿರುವ 372 ಕ್ಕಿಂತ ಹೆಚ್ಚು. ಒಟ್ಟಾರೆಯಾಗಿ ಇದು ಒಟ್ಟು ಮತಗಳ ಶೇಕಡಾ 70 ಆಗಿರಬಹುದು, ಎಂ ವೆಂಕಯ್ಯ ನಾಯ್ಡು ಪಡೆದ ಮತಗಳಿಗಿಂತ ಹೆಚ್ಚು ಮತಗಳನ್ನು ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಚುನಾವಣಾ ಮತ ಪ್ರಕ್ರಿಯೆ 780 ಸಂಸದರನ್ನು ಒಳಗೊಂಡಿದೆ. ಲೋಕಸಭೆಯಲ್ಲಿ 543 ಮತ್ತು ರಾಜ್ಯಸಭೆಯಲ್ಲಿ 245. ಮೇಲ್ಮನೆಯಲ್ಲಿ ಖಾಲಿ ಇರುವ ಎಂಟು ಸ್ಥಾನಗಳು ಮತ್ತು ಮತದಾನದಿಂದ ದೂರವಿರಲು ನಿರ್ಧರಿಸಿದ ತೃಣಮೂಲ ಕಾಂಗ್ರೆಸ್‌ನ 36 ಸಂಸದರನ್ನು ಬಿಟ್ಟರೆ, 744 ಸಂಸದರು ಮತ ಚಲಾಯಿಸುವ ನಿರೀಕ್ಷೆಯಿದೆ.
ಬಿಜೆಪಿಯ 394 ಸೇರಿದಂತೆ ಎನ್‌ಡಿಎ 441 ಸಂಸದರನ್ನು ಹೊಂದಿದೆ. ಐವರು ನಾಮನಿರ್ದೇಶಿತ ಸದಸ್ಯರು ಕೂಡ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತಿದ್ದಾರೆ. ಅಲ್ಲದೆ, ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ, ಜಗನ್ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್, ಮಾಯಾವತಿಯ ಬಹುಜನ ಸಮಾಜ ಪಕ್ಷ, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ, ಅಕಾಲಿದಳ ಮತ್ತು ಶಿವಸೇನೆಯ ಏಕನಾಥ್ ಶಿಂಧೆ ಬಣ ಸೇರಿದಂತೆ ಜಗದೀಪ ಧನಕರ್‌ಗೆ ಹಲವಾರು ಎನ್‌ಡಿಎಯೇತರ ಪಕ್ಷಗಳ ಬೆಂಬಲವೂ ಇದೆ. ಇವರು ಒಟ್ಟು 81 ಸಂಸದರನ್ನು ಹೊಂದಿದ್ದಾರೆ.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ಮಾರ್ಗರೆಟ್ ಆಳ್ವಾ ಶೇ.26 (ಸುಮಾರು 200) ಮತಗಳನ್ನು ಆಸಪಾಸು ಮತಗಳನ್ನು ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ. ಅವರಿಗೆ ಕಾಂಗ್ರೆಸ್, ಎಂಕೆ ಸ್ಟಾಲಿನ್ ಅವರ ಡಿಎಂಕೆ, ಲಾಲು ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಮತ್ತು ಎಡಪಕ್ಷಗಳ ಬೆಂಬಲವಿದೆ. ಅಲ್ಲದೆ, ಜಾರ್ಖಂಡ್ ಮುಕ್ತಿ ಮೋರ್ಚಾ, ತೆಲಂಗಾಣ ರಾಷ್ಟ್ರ ಸಮಿತಿ, ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಒಂಬತ್ತು ಸಂಸದರು ಎಂಎಸ್ ಆಳ್ವಾ ಅವರನ್ನು ಬೆಂಬಲಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಶೇ.32 ಮತಗಳನ್ನು ಪಡೆದಿದ್ದರು.
ಶುಕ್ರವಾರ, ಧನಕರ್‌ ದೆಹಲಿಯಲ್ಲಿ ಬಿಜೆಪಿ ಸಂಸದರೊಂದಿಗಿನ ಸಭೆಯಲ್ಲಿ ಭಾಗವಹಿಸಿದ್ದರು, ಅಲ್ಲಿ ಡಮ್ಮಿ ಮತದಾನವನ್ನು ನಡೆಸಲಾಯಿತು.
ಒಂದೇ ವರ್ಗಾವಣೆ ಮಾಡಬಹುದಾದ ಮತದಿಂದ ಅನುಪಾತದ ಪ್ರಾತಿನಿಧ್ಯದ ವ್ಯವಸ್ಥೆಯ ಅಡಿಯಲ್ಲಿ, ಮತದಾರರು ಅಭ್ಯರ್ಥಿಗಳ ಹೆಸರಿನ ವಿರುದ್ಧ ಆದ್ಯತೆಗಳನ್ನು ಗುರುತಿಸಬೇಕು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement