ನದಿಯಲ್ಲಿ ಹಠಾತ್ ಪ್ರವಾಹ: ಕೊಚ್ಚಿಹೋದ 14 ಕಾರುಗಳು, ವಾಹನ ಬಿಟ್ಟು ಓಡಿದ ಜನರು | ವೀಕ್ಷಿಸಿ

ಖಾರ್ಗೋನ್: ನದಿ ಮೇಲ್ಭಾಗದಲ್ಲಿ ಮಳೆಯ ನಂತರ ನದಿಯಲ್ಲಿ ಹಠಾತ್ ಪ್ರವಾಹದಿಂದಾಗಿ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಕಾಡಿನಲ್ಲಿ ಸುಮಾರು 50 ಜನರು ಸುರಕ್ಷತೆಗಾಗಿ ಎತ್ತರದ ಸ್ಥಳಗಳಿಗೆ ಓಡಿದ್ದಾರೆ ಹಾಗೂ ಕನಿಷ್ಠ 14 ಕಾರುಗಳು ಕೊಚ್ಚಿ ಹೋಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಜನರು ಭಾನುವಾರ ಸಂಜೆ ಬಲವಾಡ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಕೂಟ್ ಅರಣ್ಯದ ಸುಕ್ದಿ ನದಿಯ ಬಳಿ ಪಿಕ್ನಿಕ್‌ಗೆ ಬಂದಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಸಿಂಗ್ ಪವಾರ್ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಮಳೆಯ ಹಿನ್ನೆಲೆಯಲ್ಲಿ ನದಿಯ ನೀರಿನ ಮಟ್ಟ ಹಠಾತ್‌ ಏರಿಕೆಯಾಗಿದೆ. ಪಿಕ್ನಿಕ್ ಮಾಡುವವರು ತಮ್ಮ ಕಾರುಗಳು ಮತ್ತು ಎಸ್‌ಯುವಿಗಳನ್ನು ಬಿಟ್ಟು ತಮ್ಮನ್ನು ಉಳಿಸಿಕೊಳ್ಳಲು ಕಾಡಿನ ಎತ್ತರದ ಸ್ಥಳಗಳಿಗೆ ಧಾವಿಸಿದರು ಎಂದು ಅಧಿಕಾರಿ ಹೇಳಿದರು. ಕೆಲವು ಎಸ್‌ಯುವಿಗಳು ಸೇರಿದಂತೆ ಕನಿಷ್ಠ 14 ಕಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ ಎಂದು ಅವರು ಹೇಳಿದರು.
ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯ ಗ್ರಾಮಸ್ಥರ ಟ್ರ್ಯಾಕ್ಟರ್‌ಗಳ ಸಹಾಯದಿಂದ 10 ಕಾರುಗಳು ಮತ್ತು ಎಸ್‌ಯುವಿಗಳನ್ನು ಹೊರತೆಗೆದಿದ್ದಾರೆ. ಹಾಗೂ ಉಳದವುಗಳನ್ನು ಹುಡುಕಿ ಮೇಲೆತ್ತಲು ಪ್ರಯತ್ನ ನಡೆಸಿದ್ದಾರೆ. ಆದಾಗ್ಯೂ, ವಾಹನಗಳಿಗೆ ನೀರು ನುಗ್ಗಿದ್ದರಿಂದ ತಾಂತ್ರಿಕ ದೋಷಗಳಿಂದ ಕಾರುಗಳು ಪ್ರಾರಂಭವಾಗಿಲ್ಲ. ಹೀಗಾಗಿ ಪಿಕ್ನಿಕ್‌ಗೆ ಬಂದವರನ್ನು ಬೇರೆ ವಾಹನಗಳಲ್ಲಿ ಅವರ ಮನೆಗಳಿಗೆ ಕಳುಹಿಸಲಾಯಿತು ಎಂದು ಅಧುಕಾರಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

ಇತರ ಮೂರು ಕಾರುಗಳು ದೂರದ ಸ್ಥಳಗಳಿಗೆ ಕೊಚ್ಚಿಹೋಗಿವೆ, ಒಂದು ಸೇತುವೆಯ ಕಂಬದ ಬಳಿ ಸಿಲುಕಿಕೊಂಡಿದೆ ಎಂದು ಅವರು ಹೇಳಿದರು.ಅಂತಹ ಸ್ಥಳಗಳಲ್ಲಿ ಹಠಾತ್ ನೀರು ಉಲ್ಬಣಗೊಳ್ಳುವ ಅಪಾಯದ ಬಗ್ಗೆ ತಿಳಿಸಲು ಈ ಪ್ರದೇಶದಲ್ಲಿ ಬೋರ್ಡ್ ಹಾಕಲು ಸ್ಥಳೀಯ ಪೊಲೀಸರಿಗೆ ತಿಳಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement