ನಿರ್ಮಾಪಕನಿಗೆ ಜೀವ ಬೆದರಿಕೆ ಪ್ರಕರಣ: ನಟ ದರ್ಶನ್‌ ವಿರುದ್ಧ ದೂರು ದಾಖಲು

ಬೆಂಗಳೂರು: ಸಿನೆಮಾ ನಿರ್ಮಾಪಕ ಭರತ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೆಂಗೇರಿ ಪೊಲೀಸ್ ಠಾಣೆ ನಟ ದರ್ಶನ್‌ ವಿರುದ್ಧ ಎನ್‌ಸಿಆರ್ ದಾಖಲಾಗಿದೆ.
ಕೆಂಗೇರಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡು ಸ್ವೀಕೃತಿ ನೀಡಲಾಗಿದೆ. ಭರತ್‌ ಅವರು ದೂರು ದಾಖಲಿಸಿದ್ದಾರೆ.

‘ಭಗವಾನ್ ಶ್ರೀಕೃಷ್ಣ ಪರಮಾತ್ಮ’ ಹೆಸರಿನ ಸಿನಿಮಾವೊಂದನ್ನು ನಿರ್ಮಾಪಕ ಭರತ್ ಕಳೆದ ಎರಡು ವರ್ಷದ ಹಿಂದೆ ಮುಹೂರ್ತ ಮಾಡಿದ್ದರು, ಅನಿವಾರ್ಯ ಕಾರಣಗಳಿಂದ ಸಿನಿಮಾ ಚಿತ್ರೀಕರಣ ತಡವಾಗುತ್ತಾ ಸಾಗಿತ್ತು. ಆ ಸಿನಿಮಾಕ್ಕೆ ಧ್ರುವನ್ (ಸೂರಜ್) ನಾಯಕ ನಟರಾಗಿದ್ದರು. ಆದರೆ ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದ್ದಕ್ಕೆ ಚಿತ್ರೀಕರಣ ತಡವಾಗಿದೆ ಎಂದು ನಿರ್ಮಾಪಕ ಭರತ್ ಅವರು ನಟ ಧ್ರುವನ್ ಬಳಿ ತಿಳಿಸಿದ್ದರಂತೆ. ಇದನ್ನು ಪ್ರಶ್ನೆ ಮಾಡಿದ್ದ ಧ್ರುವನ್ ಅವರು ನಟ ದರ್ಶನ್ ತೂಗುದೀಪ ಅವರ ಬಳಿ ಹೇಳಿದ್ದರಂತೆ. ನಂತರ ನಿರ್ಮಾಪಕ ಭರತ್‌ ಅವರಿಗೆ ದರ್ಶನ್‌ ಕರೆ ಮಾಡಿದ್ದು, ಆ ಸಮಯದಲ್ಲಿ ದರ್ಶನ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement