ನವದೆಹಲಿ: ನೋಯ್ಡಾ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ‘ಬಿಜೆಪಿ ನಾಯಕ’ ಶ್ರೀಕಾಂತ್ ತ್ಯಾಗಿ, ತಮ್ಮ ವಾಹನದ ಮೇಲಿನ ವಿವಿಐಪಿ ಸ್ಟಿಕ್ಕರ್ ಅನ್ನು ಎಸ್ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ನೀಡಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.
ತಮ್ಮ ಕಾರಿನ ಮೇಲಿನ ಸ್ಟಿಕ್ಕರ್ ಅನ್ನು ಸ್ವಾಮಿ ಪ್ರಸಾದ್ ಮೌರ್ಯ ಒದಗಿಸಿದ್ದಾರೆ. ರಾಜ್ಯ ಲಾಂಛನವನ್ನು ತಾನೇ ತಯಾರಿಸಿದ್ದು, ಭಯದ ವಾತಾವರಣವನ್ನು ಸೃಷ್ಟಿಸುವುದು ಉದ್ದೇಶವಾಗಿತ್ತು ಎಂದು ಹೇಳಿದ್ದಾನೆ ಎಂದು ನೋಯ್ಡಾದ ಪೊಲೀಸ್ ಆಯುಕ್ತ ಅಲೋಕ್ ಸಿಂಗ್ ಮಂಗಳವಾರ ಹೇಳಿದ್ದಾರೆ.
ನೋಯ್ಡಾ ಪೊಲೀಸರು ಶ್ರೀಕಾಂತ್ ತ್ಯಾಗಿಯ ಮತ್ತೊಂದು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಿಜೆಪಿ ಧ್ವಜವಿರುವ ಎಸ್ಯುವಿ ಮತ್ತು ಟಿಂಟೆಡ್ ವಿಂಡ್ಸ್ಕ್ರೀನ್ನಲ್ಲಿ ವಿವಿಐಪಿ ವಿಧಾಯಕ ಸ್ಟಿಕ್ಕರ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ.
ಸದ್ಯ ತ್ಯಾಗಿಗೆ ಸೇರಿದ ಐದು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ನಿವಾಸಿಗಳಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲು ತ್ಯಾಗಿ ಸ್ಟಿಕ್ಕರ್ಗಳನ್ನು ಬಳಸಿದ್ದಾರೆ.
ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಬಿಜೆಪಿಯ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಎಂದು ಸಾಮಾಜಿಕ ಮಾಧ್ಯಮದಲ್ಲಿ ಗುರುತಿಸಿಕೊಂಡಿರುವ ಶ್ರೀಕಾಂತ್ ತ್ಯಾಗಿಯನ್ನು ನೋಯ್ಡಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನೋಯ್ಡಾದ ಸೆಕ್ಟರ್ -93 ಬಿ ಯಲ್ಲಿನ ಗ್ರ್ಯಾಂಡ್ ಓಮ್ಯಾಕ್ಸ್ ಹೌಸಿಂಗ್ ಸೊಸೈಟಿಯಲ್ಲಿ ಆತನ ಮನೆಯ ಹೊರಗಿನ ಅಕ್ರಮ ನಿರ್ಮಾಣವನ್ನು ಬುಲ್ಡೋಜರ್ಗಳು ಕಿತ್ತುಹಾಕಿದ ಒಂದು ದಿನದ ನಂತರ ಅವರ ಬಂಧನವಾಗಿದೆ.
ಸೋಮವಾರ, ಭಾನುವಾರ ಸಂಜೆ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಗೆ ಪ್ರವೇಶಕ್ಕೆ ಅನುಮತಿ ನೀಡದೆ ಪ್ರವೇಶಿಸಿದ್ದಕ್ಕಾಗಿ ಮತ್ತು ತ್ಯಾಗಿಯಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯ ವಿಳಾಸವನ್ನು ಕೇಳಿದ್ದಕ್ಕಾಗಿ ಆತನ ಆರು ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ