ಕೊಪ್ಪಳ ಜಿಲ್ಲೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ: ಇಬ್ಬರ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಗುರುವಾರ ಬೆಳಗ್ಗೆ ಮಾರಾಮಾರಿ ನಡೆದು ಇಬ್ಬರು ಸಾವಿಗೀಡಾದ ಘಟನೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ.
ಓರ್ವ ಯುವಕನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೃತರನ್ನು ಯಕಪ್ಪ ತಳವಾರ (60) ಮತ್ತು ಬಾಷಾಸಾಬ(22) ಎಂದು ಗುರುತಿಸಲಾಗಿದೆ. ಧರ್ಮಣ್ಣ ಎಂಬವರಿನಿಗೆ ಗಂಭೀರ ಗಾಯವಾಗಿದ್ದು, ‌ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ ಆರು ಮಂದಿ ಗಾಯಗೊಂಡಿದ್ದಾರೆ.
ಗ್ರಾಮದಲ್ಲಿ ಪ್ರಕ್ಷ್ಯುಬ್ಧ ವಾತಾವರಣವಿದ್ದು, ಕಲ್ಲು ತೂರಾಟ ಸಹ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಕೆಲವು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಗ್ರಾಮದ ಸುತ್ತ 2 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸ್ಥಳಕ್ಕೆ ಎಸ್ಪಿ ಅರುಣಾಂಗ್ಷು ಗಿರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಪ್ರಕ್ಷ್ಯುಬ್ಧ ವಾತಾವರಣ ನಿರ್ಮಾಣವಾಗಿದೆ. 4 ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಡಿವೈಎಸ್ಪಿ ಸಹಿತ ಪೊಲೀಸ್ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸುತ್ತಿದ್ದಾರೆ.

 

 

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement