ಬಿಡುಗಡೆಗೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜೀವ್ ಗಾಂಧಿ ಹಂತಕಿ ನಳಿನಿ

ನವದೆಹಲಿ: ಪೆರಾರಿವಾಲನ್ ನಂತರ, ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮತ್ತೊಬ್ಬ ಅಪರಾಧಿ ನಳಿನಿ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಅರ್ಜಿಯ ವಿಚಾರಣೆ ನಡೆಯುತ್ತಿರುವಾಗಲೇ ಆಕೆ ಜಾಮೀನು ಕೋರಿದ್ದರು.
ಮಾಜಿ ಪ್ರಧಾನಿ ಹತ್ಯೆ ಪ್ರಕರಣದಲ್ಲಿ ನಳಿನಿ ಸೇರಿ ಆರು ಮಂದಿಗೆ ಶಿಕ್ಷೆ ವಿಧಿಸಲಾಗಿತ್ತು. 31 ವರ್ಷಗಳ ಕಾಲ ಜೈಲಿನಲ್ಲಿದ್ದ ಅಪರಾಧಿಗಳಲ್ಲಿ ಒಬ್ಬರಾದ ಪೆರಾರಿವಾಳನ್ ಇತ್ತೀಚೆಗೆ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯ ನಂತರ ಬಿಡುಗಡೆಯಾಗಿದ್ದರು. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ನಳಿನಿ, ಆಕೆಯ ಪತಿ ಮುರುಗನ್, ಸಂತನ್, ಜಯಕುಮಾರ್, ಪೆರಾರಿವಾಲನ್, ರವಿಚಂದ್ರನ್ ಮತ್ತು ರಾಬರ್ಟ್ ಪಯಸ್ ಅವರಿಗೆ ಶಿಕ್ಷೆ ವಿಧಿಸಲಾಗಿದೆ.
ತಮಿಳುನಾಡು ರಾಜ್ಯಪಾಲರಿಗೆ ತನ್ನ ಕ್ಷಮಾದಾನ ಅರ್ಜಿಯ ಕುರಿತು ನಿರ್ಧಾರ ಕೈಗೊಳ್ಳಲು ವಿಳಂಬ ಮಾಡುವ ಹಕ್ಕು ಇಲ್ಲ ಎಂದು ಸುಪ್ರೀಂ ಕೋರ್ಟ್ ಪೆರಾರಿವಾಳನ್ ಅವರನ್ನು ಬಿಡುಗಡೆ ಮಾಡಿದೆ.ಮೇ 1991 ರಲ್ಲಿ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಎಲ್‌ಟಿಟಿಇ ಆತ್ಮಹತ್ಯಾ ಬಾಂಬರ್‌ನಿಂದ ರಾಜೀವ್ ಗಾಂಧಿ ಹತ್ಯೆಗೀಡಾಗಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement