ಪತಿ ಕಿರುಕುಳ: ಪ್ರಧಾನಿ ಮೋದಿಗೆ ವೀಡಿಯೋ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಉಪ ಮೇಯರ್

ಬೆಂಗಳೂರು: ಮಾಜಿ ಉಪ ಮೇಯರ್‌ ಶಹತಾಜ್ ಬೇಗಂ ತಮ್ಮ ಪತಿ ಹಾಗೂ ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೀಡಿಯೊ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕುತ್ತಿಗೆಗೆ ಸೀರೆಯಿಂದ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಫೇಸ್ಬುಕ್‌ನಲ್ಲಿ ಅವರು ವೀಡಿಯೋ ಅಪ್ಲೋಡ್ ಮಾಡಿದ್ದಾರೆ. ಮೋದಿಯವರೇ ಒಂದೋ ನನಗೆ ರಕ್ಷಣೆ ನೀಡಿ, ಇಲ್ಲವಾದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವೀಡಿಯೋದಲ್ಲಿ ಹೇಳಿದ್ದಾರೆ.

ಪತಿ ಅನ್ವರ್ ಪಾಷಾ ಹಾಗೂ ಕೆ.ಆರ್. ಪುರ ಠಾಣೆ ಪೊಲೀಸರ ಕಿರುಕುಳದಿಂದ ಬೇಸತ್ತಿದ್ದೇನೆ. ಮದ್ಯ ವ್ಯಸನಿಯಾದ ಪತಿ ಹಲವು ಯುವತಿಯರ ಜೊತೆ ಸಂಬಂಧವಿಟ್ಟುಕೊಂಡಿದ್ದಾರೆ. ಆಸ್ತಿ ಮೇಲೂ ಸಾಲ ಮಾಡಿ, ಬ್ಯಾಂಕ್‌ನಿಂದ ನೋಟಿಸ್ ಕೊಡಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿದ್ದರು. ಇದಕ್ಕೂ ಮೊದಲು 2011ರಲ್ಲಿ ಪತ್ರಿಕೆಯೊಂದರಲ್ಲಿ ಜಾಹೀರಾತು ನೀಡಿ ತಲಾಖ್ ನೀಡಿದ್ದರು ಎಂದು ಅವರು ಹೇಳಿಕೊಂಡಿದ್ದಾರೆ.
ತಲಾಖ್ ಪ್ರಶ್ನಿಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದು, ನನ್ನ ಪರವಾಗಿಯೇ ತೀರ್ಪು ಬಂದಿತ್ತು. ಆದರೆ ಆ ಬಳಿಕವೂ ಕಿರುಕುಳ ಮುಂದುವರಿದಿದೆ. ಕೆ.ಆರ್‍. ಪುರ ಠಾಣೆಗೆ ದೂರು ನೀಡಿದರೆ ರಕ್ಷಣೆ ನೀಡಬೇಕಾದರೆ ಹಣ ನೀಡಬೇಕೆಂದು ಪೊಲೀಸರು ಹೇಳುತ್ತಾರೆ. ನೀನು ಮಾಜಿ, ಹೆಚ್ಚು ಮಾತನಾಡಬೇಡ ಎಂದು ಗದರಿಸುತ್ತಾರೆ. ಕೆಲ ಪೊಲೀಸರು, ಸಂಬಂಧಿಕರ ಮೇಲೆ ಹಲ್ಲೆ ಸಹ ಮಾಡಿದ್ದಾರೆ’ ಎಂದು ಶಹತಾಜ್ ತಿಳಿಸಿದ್ದಾರೆ. ಪೊಲೀಸರೇ ಈ ರೀತಿ ಮಾಡಿದರೆ ನ್ಯಾಯ ಕೇಳಲು ಯಾರ ಬಳಿ ಹೋಗಬೇಕು ಎಂದು ಮಹಿಳೆ ಪ್ರಶ್ನಿಸಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement