ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಿ ಎಂಬ ಹೇಳಿಕೆ ನಂತರ ಶ್ರೀನಗರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಫಾರೂಕ್ ಅಬ್ದುಲ್ಲಾ

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಶ್ರೀನಗರದ ಲೋಕಸಭಾ ಸಂಸದ ಫಾರೂಕ್ ಅಬ್ದುಲ್ಲಾ ಅವರು ‘ಹರ್ ಘರ್ ತಿರಂಗಾ ಅಭಿಯಾನ’ದ ಬಗ್ಗೆ ಅಸಮಾಧಾನ ಹೊರಹಾಕಿದ ವಾರಗಳ ನಂತರ ದೇಶದ 7 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.
ಜುಲೈ 6 ರಂದು, ಕೇಂದ್ರದ ಅಭಿಯಾನದ ಕುರಿತಾದ ಪ್ರಶ್ನೆಯೊಂದಕ್ಕೆ ಕಿರಕಿರಿಗೊಂಡ ಫಾರೂಕ್ ಅಬ್ದುಲ್ಲಾ ಸ್ಥಳೀಯ ಭಾಷೆಯಲ್ಲಿ ಇದನ್ನು “ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಿ” ಎಂದು ಹೇಳಿದ್ದರು.. ತಿರಂಗ ಪ್ರಚಾರದ ಪ್ರಶ್ನೆಯು ಹಿರಿಯ ರಾಜಕಾರಣಿಗೆ ಕಿರಿಕಿರಿಯನ್ನುಂಟು ಮಾಡಿತು, ನಂತರ ಅವರು ತಮ್ಮ ಕಾರಿನಲ್ಲಿ ಕುಳಿತು ಹೊರಟರು.

ಕಳೆದ ವಾರ ಕೋವಿಡ್ ಪಾಸಿಟಿವ್ ಪರೀಕ್ಷೆಗೆ ಒಳಗಾದ ಅಬ್ದುಲ್ಲಾ ಅವರು ಇಂದು ತಮ್ಮ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ಲಾ, ದೇಶವು ಸ್ವಾತಂತ್ರ್ಯ ಪಡೆದ ಸಮಯದಿಂದ ಬಹಳ ದೂರ ಸಾಗಿದೆ, ಆದರೆ ಈಗಲೂ ಅದರ ಮುಂದೆ ಸವಾಲುಗಳಿವೆ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement