ಶಿವಮೊಗ್ಗ: ಫ್ಲೆಕ್ಸ್ ವಿಚಾರಕ್ಕೆ ಶಿವಮೊಗ್ಗದಲ್ಲಿ ನಡೆದ ಗಲಾಟೆಯ ನಂತರ ಈಗ ಭದ್ರಾವತಿಯಲ್ಲೂ ಹಲ್ಲೆ ಪ್ರಕರಣ ನಡೆದ ಬಗ್ಗೆ ವರದಿಯಾಗಿದೆ. ನಿಷೇಧಾಜ್ಞೆಯ ನಡುವೆಯೂ ಭದ್ರಾವತಿಯ ನಗರದ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚಾಕು ಇರಿತಕ್ಕೆ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ.
ಸುನೀಲ್ (27) ಎಂಬವರ ಮೇಲೆ ಇಂದು, ಮಂಗಳವಾರ ಬೆಳಗ್ಗೆ ಭದ್ರಾವತಿಯಲ್ಲಿ ಏಕಾಏಕಿ ಹಲ್ಲೆ ಮಾಡಿದ್ದಾರೆ. ಇಂದು ಬೆಳಗ್ಗೆ 8:30ರ ವೇಳೆಗೆ ಭದ್ರಾವತಿಯ ನೆಹರು ನಗರದಲ್ಲಿ ಹಲ್ಲೆ ನಡೆಸಲಾದೆ ಎಂದು ಹೇಳಲಾಗಿದ್ದು, ಸುನಿಲ್ ಸ್ವಲ್ಪದರಲ್ಲಿಯೇ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆಗೊಳಗಾದ ಸುನೀಲ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂದಿನಂತೆ ನೆಹರು ನಗರದ ಸುನೀಲ್ ಇಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಈ ಸಮಯದಲ್ಲಿ ಅವರ ಮೇಲೆ ಹಲ್ಲೆ ನಡೆದಿದೆ. ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ