ನಾಳೆ ಬಿಜೆಪಿ ಪದಾಧಿಕಾರಿಗಳ ಮಹತ್ವದ ಸಭೆ

ಬೆಂಗಳೂರು: ಮುಂಬರುವ ಚುನಾವಣೆಗೆ ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚಿಸಲು ನಾಳೆ, ಗುರುವಾರ ಬಿಜೆಪಿ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸೇರಿದಂತೆ ಜಿಲ್ಲಾಧ್ಯಕ್ಷರು, ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರು ಮತ್ತಿತರರು ಭಾಗಿಯಾಗಲಿದ್ದಾರೆ.

ಮುಂಬರುವ ಬಿಬಿಎಂಪಿ, ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆ ಸೇರಿದಂತೆ 2023ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಬಲಪಡಿಸುವ ಗುರಿಯೊಂದಿಗೆ ಮಹತ್ವದ ಚರ್ಚೆಗಳು ನಡೆಯಲಿವೆ ಎಂದು ಹೇಳಲಾಗಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಕಟೀಲು ಅವರ ಅಧಿಕಾರ ಅವಧಿ ಈ ತಿಂಗಳು ಕೊನೆಗೊಳ್ಳಲಿದ್ದು, ತೆರವಾಗಲಿರುವ ಈ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವ ಬಗ್ಗೆಯೂ ಚರ್ಚೆ ನಡೆಯುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement