ಆಗಸ್ಟ್‌ 19ರಿಂದ ಎಂ.ಬಿ. ಪಾಟೀಲ ರಾಜ್ಯ ಪ್ರವಾಸ : ಮಠ, ಮಸೀದಿ, ಚರ್ಚ್‌ಗಳ ಭೇಟಿ ಸಾಧ್ಯತೆ

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಆಗಸ್ಟ್‌ 19 ಶುಕ್ರವಾರದಿಂದ ಮೊದಲ ಹಂತದ ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, ಕಾಂಗ್ರೆಸ್‌ ಚುನಾವಣಾ ತಯಾರಿ ಆರಂಭಿಸಿದೆ.
2023ರ ವಿಧಾನಸಭೆ ಚುನಾವಣೆಗೆ ಪ್ರಚಾರ ಸಾರಥ್ಯ ವಹಿಸಿಕೊಂಡು ಸುಮಾರು 6 ತಿಂಗಳ ಬಳಿಕ ಎಂ.ಬಿ. ಪಾಟೀಲ್‌ ಅಖಾಡಕ್ಕೆ ಇಳಿದಿದ್ದು, ಪ್ರಚಾರ ಸಮಿತಿಯ ಕಚೇರಿಯನ್ನು ಮಂಗಳವಾರ ಉದ್ಘಾಟಿಸಿದ್ದಾರೆ. ಆಗಸ್ಟ್‌ 19 ರಿಂದ ವಿವಿಧ ಸಮುದಾಯಗಳ ಮತಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯಾದ್ಯಂತ ಮಠ-ಮಂದಿರಗಳು, ಮಸೀದಿ, ಚರ್ಚ್‌ಗಳ ಭೇಟಿಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಅಲ್ಲದೆ, ಹಲವು ಭಾಗಗಳಲ್ಲಿ ಪಕ್ಷದ ವತಿಯಿಂದ ನಡೆಯಲಿರುವ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ವಿವಿಧ ಸಮುದಾಯಗಳ ಪ್ರಮುಖರನ್ನು ಭೇಟಿ ಮಾಡಲಿದ್ದಾರೆ
ಆಗಸ್ಟ್‌ 19ರಂದು ಕಲ್ಯಾಣ ಕರ್ನಾಟಕ ಭಾಗದಿಂದ ತಮ್ಮ ಪ್ರವಾಸ ಆರಂಭಿಸಲಿರುವ ಅವರು, ಸೆಪ್ಟೆಂಬರ್‌ 10ರ ವರೆಗೆ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಚಾರ ಸಮಿತಿಯ ಪದಾಧಿಕಾರಿಗಳ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement