ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೆ ಮತ ಚಲಾವಣೆಗೆ ಅವಕಾಶ: 25 ಲಕ್ಷ ಹೊಸ ಮತದಾರರ ಸೇರ್ಪಡೆ ಸಾಧ್ಯತೆ, ಎನ್‌ಸಿ, ಪಿಡಿಪಿ ತೀವ್ರ ಆಕ್ಷೇಪ

ಶ್ರೀನಗರ: ಮುಂದಿನ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 25 ಲಕ್ಷ ಹೊಸ ಮತದಾರರು ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಸ್ಥಳೀಯರಲ್ಲದವರು ಈ ಪ್ರದೇಶದಲ್ಲಿ ಮೊದಲ ಬಾರಿಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಈ ಕ್ರಮವನ್ನು ಕಟುವಾಗಿ ಟೀಕಿಸಿದ್ದಾರೆ, ಇದು ಚುನಾವಣೆಯ ಮೇಲೆ ಪ್ರಭಾವ ಬೀರುವ “ಅಪಾಯಕಾರಿ ಪ್ರಯತ್ನ” ಎಂದು ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರವು ನಾಲ್ಕು ವರ್ಷಗಳಿಂದ ಚುನಾಯಿತ ಸರ್ಕಾರವಿಲ್ಲದೆ ಇದೆ. ಮುಂದಿನ ವರ್ಷ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು 2019ರಲ್ಲಿ ಕೇಂದ್ರವು 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ, ಕಾಶ್ಮೀರೇತರರಿಗೆ ಮತ ಚಲಾಯಿಸಲು ಮತ್ತು ಭೂಮಿಯನ್ನು ಹೊಂದಲು ಸಂವಿಧಾನವನ್ನು ಬದಲಾಯಿಸಿದ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರು ಮತದಾರರಾಗಿ ಅಲ್ಲಿ ನೋಂದಾಯಿಸಲು ಅನುವು ಮಾಡಿಕೊಡುತ್ತದೆ.

ಜಮ್ಮು ಮತ್ತು ಕಾಶ್ಮೀರ ಮುಖ್ಯ ಚುನಾವಣಾಧಿಕಾರಿ ಹಿರ್ದೇಶ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಗೆ ಮುನ್ನ ಈ ಪ್ರದೇಶದಲ್ಲಿ 20 ಲಕ್ಷಕ್ಕೂ ಹೆಚ್ಚು ಹೊಸ ಮತದಾರರು ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ. ಈ ಪ್ರದೇಶದಲ್ಲಿ ಈಗಿರುವ 76 ಲಕ್ಷ ಮತದಾರರ ಮೂರನೇ ಒಂದು ಭಾಗದಷ್ಟು ಹೊಸ ಮತದಾರರ ಸೇರ್ಡೆಯಾಗಬಹುದು ಎಂದು ಹೇಳಿದರು.
“370 ರದ್ದಾದ ನಂತರ, ಮೊದಲು ಮತ ಚಲಾಯಿಸಲು ಸಾಧ್ಯವಾಗದವರು ಈಗ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು. ಅಂತಿಮ ಪಟ್ಟಿಯಲ್ಲಿ ಕಾಶ್ಮೀರೇತರರು ಸೇರಿದಂತೆ (20-25 ಲಕ್ಷ) ಹೊಸ ಮತದಾರರ ಸೇರ್ಪಡೆಯನ್ನು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಹಿರ್ದೇಶಕುಮಾರ್ ಹೇಳಿದ್ದಾರೆ.
ಭಾರತದಾದ್ಯಂತ ಎಲ್ಲಾ ರಾಜ್ಯಗಳಿಗೆ ಇರುವಂತೆಯೇ, ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಯಾರಾದರೂ ಅಲ್ಲಿ ಮತ ಚಲಾಯಿಸಬಹುದು ಎಂದು ಅವರು ಸೂಚಿಸಿದರು.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು...!

ಜಮ್ಮುಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳಿಂದ ಆಕ್ಷೇಪ
ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಈ ಪ್ರದೇಶದಲ್ಲಿ ಬಿಜೆಪಿಗೆ ತನ್ನ ಬೆಂಬಲದ ಬಗ್ಗೆ “ಅಭದ್ರತೆ” ಇರುವುದು ಈ ನಿರ್ಧಾರಕ್ಕೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ನಿಜವಾದ ಮತದಾರರ ಬೆಂಬಲದ ಬಗ್ಗೆ ಬಿಜೆಪಿಯು ಅಸುರಕ್ಷಿತವಾಗಿದೆಯೇ? ಸ್ಥಾನಗಳನ್ನು ಗೆಲ್ಲಲು ತಾತ್ಕಾಲಿಕ ಮತದಾರರನ್ನು ಆಮದು ಮಾಡಿಕೊಳ್ಳುವ ಅಗತ್ಯವಿದೆಯೇ? ಜಮ್ಮು ಮತ್ತು ಕಾಶ್ಮೀರದ ಜನರಿಗೆ ತಮ್ಮ ಹಕ್ಕು ಚಲಾಯಿಸಲು ಅವಕಾಶವನ್ನು ನೀಡಿದಾಗ ಇವುಗಳಲ್ಲಿ ಯಾವುದೂ ಬಿಜೆಪಿಗೆ ಸಹಾಯ ಮಾಡುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಬರೆದಿದ್ದಾರೆ.
ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ, ಬಿಜೆಪಿ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರುವತ್ತ ಗಮನ ಹರಿಸಿದೆ. “ಸ್ಥಳೀಯರಲ್ಲದವರಿಗೆ ಮತ ಚಲಾಯಿಸಲು ಅವಕಾಶ ನೀಡುವುದು ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲಿದೆ. ಸ್ಥಳೀಯರನ್ನು ಬಲಹೀನಗೊಳಿಸಲು ಬಿಗಿ ಮುಷ್ಟಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆಡಳಿತವನ್ನು ಮುಂದುವರಿಸುವುದು ನಿಜವಾದ ಗುರಿಯಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ನೀತಿಗಳನ್ನು ಟೀಕಿಸುವಾಗ ನಾಜಿ ಜರ್ಮನಿ ಮತ್ತು ಪ್ಯಾಲೆಸ್ತೀನ್ ಅನ್ನು ಅವರು ಉಲ್ಲೇಖಿಸಿದರು. ಪ್ರಜಾಪ್ರಭುತ್ವ ಅಪಾಯದಲ್ಲಿದೆ. 25 ಲಕ್ಷ ಬಿಜೆಪಿ ಮತದಾರರನ್ನು ಹಿಂಬಾಗಿಲಿನ ಮೂಲಕ ಕರೆತರಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದರು.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement