ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತನಲ್ಲ; ನಾವು ಸಾಕ್ಷ್ಯ ನೀಡಿದ್ದೇವೆ– ಮಿಥುನ್‌ ಗೌಡ

ಮಡಿಕೇರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಅಲ್ಲ. ಅದಕ್ಕೆ ಬೇಕಾದ ಎಲ್ಲಾ ಸಾಕ್ಷ್ಯಗಳನ್ನು ನಾವು ಬಿಡುಗಡೆ ಮಾಡಿದ್ದೇವೆ ಎಂದು ಕೊಡಗು ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್‌ ಗೌಡ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್‌ ಎಂಬಾತ ಮೊನ್ನೆ ಅರೆಸ್ಟ್ ಆದಾಗ ಬಿಜೆಪಿ ನಾಯಕರೇ ಆತನನ್ನು ಬಿಡಿಸಿದ್ದಾರೆ. ಈಗಲೂ ಕೂಡ ಅವನಿಗೆ ಜಾಮೀನು ಕೊಡಿಸಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ. ಆತ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ನಮ್ಮ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

ಆತ ಸೋಮವಾರಪೇಟೆ ಮೂಲದವನಂತೆ. ನಾನೂ ಕೂಡ ಸೋಮವಾರಪೇಟೆಯವನು. ಆತ ನಮಗೆ ಈವರೆಗೆ ಯಾವ ಕಾರ್ಯಕ್ರಮದಲ್ಲಿಯೂ ಕಂಡಿಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೆ ಸಾಕ್ಷಿ ಕೊಡಲಿ. ಸಾಕ್ಷಿ ನೀಡಿದರೆ ಅವನು ಕಾಂಗ್ರೆಸ್ ಕಾರ್ಯಕರ್ತ ಎಂದು ಒಪ್ಪಿಕೊಳ್ಳಬಹುದು, ಸುಮ್ಮನೆ ನಾನು ಕಾಂಗ್ರೆಸ್‌ ಕಾರ್ಯಕರ್ತ ಎಂದರೆ ಒಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಶಲ್ಯ ಹಾಕೊಂಡು ಫೋಟೋ ತೆಗೆಸಿಕೊಂಡ ತಕ್ಷಣ ಕಾಂಗ್ರೆಸ್ ಕಾರ್ಯಕರ್ತ ಆಗುವುದಿಲ್ಲ. ಬಿಜೆಪಿ ಶಾಸಕರು ಆತನ ಹೆಗಲ ಮೇಲೆ ಕೈ ಹಾಕಿಕೊಂಡ ಫೋಟೋ ಸಹ ಇದೆಯಲ್ಲ. ಸೋಮವಾರಪೇಟೆ ಭಾಗದ ಜಿಪಂ ಕಾಮಗಾರಿಗಳನ್ನು ಸಂಪತ್ ಮಾಡುತ್ತಿದ್ದಾನೆ.. ಶಾಸಕರ ಒತ್ತಡಕ್ಕೆ ಒಳಗಾಗಿ ಆತ ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದ್ದಾನೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement