ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಪುದುಚೇರಿ ಉಸ್ತುವಾರಿ ದಿನೇಶ್ ಗುಂಡೂರಾವ್‌ಗೆ ಘೇರಾವ್

ಪುದುಚೇರಿ : ಪುದುಚೇರಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರ ಕಾರಿಗೆ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ವಾಹನವನ್ನು ಹತ್ತದಂತೆ ತಡೆಯಲು ಯತ್ನಿಸಿದ ಘಟನೆ ನಡೆದಿದೆ.
ಮಾಜಿ ಸಚಿವರೊಬ್ಬರನ್ನು ಬೆಂಬಲಿಸುವ ಬಣವೊಂದು ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಲು ಆರಂಭಿಸುತ್ತಿದ್ದಂತೆಯೇ ಪುದುಚೇರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಈ ದೃಶ್ಯ ಕಂಡುಬಂತು. ಪಕ್ಷದ ಕಚೇರಿಯೊಳಗೆ ಸಭೆ ನಡೆಯುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಅವರ ಬೆಂಬಲಿಗರು ಕೂಡ ಹೊರಗೆ ಜಮಾಯಿಸಿದ ನಂತರ ಎರಡು ಗುಂಪುಗಳ ನಡುವೆ ವಾಗ್ವಾದ ಮತ್ತು ಘೋಷಣೆ ಹೆಚ್ಚಾಯಿತು.

ದಿನೇಶ್ ಗುಂಡೂರಾವ್ ಸಭೆಯಿಂದ ಹೊರಬರುತ್ತಿದ್ದಂತೆ ಕಾರ್ಯಕರ್ತರು ಅವರನ್ನು ಸುತ್ತುವರೆದು ಅಶಿಸ್ತಿನ ರೀತಿಯಲ್ಲಿ ವರ್ತಿಸಲು ಪ್ರಾರಂಭಿಸಿದರು, ಅಲ್ಲದೆ ನಾಯಕತ್ವ ಬದಲಾವಣೆಯ ಬಗ್ಗೆ ಉತ್ತರ ನೀಡುವಂತೆ ಅವರನ್ನು ಒತ್ತಾಯಿಸಿದರು.
ನಂತರ ಅವರನ್ನು ಅವರ ವಾಹನಕ್ಕೆ ಕರೆದೊಯ್ಯಲಾಯಿತು. ಮತ್ತು ಆಗ ಕೆಲವು ಕಾರ್ಯಕರ್ತರು ವಾಹನವನ್ನು ಸುತ್ತುವರಿಯಲು ಪ್ರಯತ್ನಿಸಿದರು.
ಘಟನೆಯ ನಂತರ, ಪುದುಚೇರಿ ಕಾಂಗ್ರೆಸ್ ಅಧ್ಯಕ್ಷ ಎವಿ ಸುಬ್ರಮಣಿಯನ್ ಅವರು ಐವರು ಪಕ್ಷದ ಕಾರ್ಯಕರ್ತರನ್ನು ಅಮಾನತುಗೊಳಿಸಿದ್ದಾರೆ.

ಪ್ರಮುಖ ಸುದ್ದಿ :-   ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ...!

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement