ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ : ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಪತ್ರ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಕೋರಿ ಶಾಸಕ ಸಿ.ಟಿ. ರವಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಗಣೇಶೋತ್ಸವ ಕುರಿತು ಪಕ್ಷದ ಯಾವ ನಾಯಕರೂ ತಮಗೆ ಮನವಿ ಮಾಡಿಲ್ಲ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದರು. ಆದರೆ ಈಗ ಸಿಟಿ ರವಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ.
ಚಾಮರಾಜಪೇಟೆಯ ಆಟದ ಮೈದಾನ ಕಂದಾಯ ಇಲಾಖೆಯಡಿಯಲ್ಲಿದ್ದರೂ ಸಿ.ಟಿ.ರವಿ ಕಂದಾಯ ಇಲಾಖೆಗೆ ಪತ್ರ ಬರೆಯದೇ ನೇರವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಚಾಮರಾಜಪೇಟೆ ನಾಗರೀಕ ಒಕ್ಕೂಟದ ಮನವಿಯನ್ನು ಮುಖ್ಯಮಂತ್ರಿ ಬೊಮ್ಮಾಯಿಗೆ ರವಾನಿಸಿದ ಸಿ.ಟಿ.ರವಿ, ಮನವಿಯನ್ನು ಆದ್ಯತೆಯ ಮೇರೆಗೆ ಪರಿಗಣಿಸುವಂತೆ ಕೋರಿದ್ದಾರೆ.

ಚಾಮರಾಜಪೇಟೆ ಮೈದಾನದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಇಲ್ಲಿಯವರೆಗೆ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆಗೆ ಅವಕಾಶ ಇತ್ತು. ಪ್ರಾರ್ಥನೆ ಹೊರತು ಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳು ಈವರೆಗೆ ನಡೆದಿರಲಿಲ್ಲ.
ಈ ಆಟದ ಮೈದಾನದ ಆಸ್ತಿ ಯಾರಿಗೆ ಸೇರಿದ್ದು ಎನ್ನುವುದು ದೊಡ್ಡ ಪ್ರಶ್ನೆ ಆಗಿತ್ತು. ವಕ್ ಬೋರ್ಡ್ ಈ ಮೈದಾನಕ್ಕೆ ಸಂಬಂಧಿಸಿದಂತೆ ಸರಿಯಾದ ದಾಖಲೆ ನೀಡದ ಕಾರಣ ಸರ್ಕಾರ ಈ ಭೂಮಿ ಕಂದಾಯ ಇಲಾಖೆಗೆ ಸೇರಿದ ಜಾಗ ಎಂದು ತಿಳಿಸಿತ್ತು. ಅಲ್ಲದೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಈ ಬಾರಿ ಕಂದಾಯ ಇಲಾಖೆಯಿಂದಲೇ ಆಚರಿಸಲಾಗಿತ್ತು.

ಪ್ರಮುಖ ಸುದ್ದಿ :-   ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement