ಮದರಸಾಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಸ್ವರೂಪ ಬದಲಾವಣೆ: ಸಚಿವ ನಾಗೇಶ

ಬೆಂಗಳೂರು : ಹಲವಾರು ಮುಸ್ಲಿಂ ಪೋಷಕರ ಆಶಯದಂತೆ ಮದರಸಾಗಳಲ್ಲೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಣ ಮಂಡಳಿ ರಚಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ರಾಜ್ಯದ ಮದರಸಾಗಳಲ್ಲಿ ನೀಡುತ್ತಿರುವ ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯ ಮತ್ತು ಶಿಕ್ಷಣದ ಸ್ವರೂಪ ತಿಳಿಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮದರಸಾಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ 15 ದಿನಗಳಲ್ಲಿ ವರದಿ ನೀಡುವಂತೆ ಶಿಕ್ಷಣ ಸಚಿವರು ಸೂಚಿಸಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮದರಸಾ ಶಿಕ್ಷಣದತ್ತ ಸರ್ಕಾರ ಗಮನ ನೀಡಬೇಕು. ಎಲ್ಲರಂತೆ‌ ತಮ್ಮ ಮಕ್ಕಳೂ ಉತ್ತಮ ಶಿಕ್ಷಣ ಪಡೆದು ಸ್ಪರ್ಧಾತ್ಮಕ ಪ್ರಪಂಚಕ್ಕೆ ತೆರೆದುಕೊಳ್ಳಬೇಕು ಎಂದು ಮುಸ್ಲಿಂ ಸಮುದಾಯದವರೇ ಕೇಳಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಸರ್ಕಾರ ಈ ಚಿಂತನೆ ನಡೆಸಿದೆ. ಮದರಸಾಗಳಲ್ಲಿ ಪಠ್ಯಗಳ ಸ್ವರೂಪದಲ್ಲೂ ಬದಲಾವಣೆ ತರುವ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಮುಂದಿನ ರೂಪರೇಷೆ ಸಿದ್ಧಪಡಿಸುವಾಗ ಉತ್ತರ ಪ್ರದೇಶ ಅಥವಾ ಇತರೆ ರಾಜ್ಯಗಳ ಮಾದರಿ ಅನುಸರಿಸುವುದಿಲ್ಲ. ನಮ್ಮದೇ ನೀತಿನಿಯಮಗಳನ್ನು ರೂಪಿಸಲಾಗುತ್ತದೆ ಎಂದರು.
ಚಿಕ್ಕಪೇಟೆ ಸರ್ಕಾರಿ ಶಾಲೆಯ ದಾಖಲೆಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ಸ್ವಾತಂತ್ರ್ಯ ಪೂರ್ವದ ಆ ಶಾಲೆಯ ಕೆಲವು ದಾಖಲೆಗಳು ಸಿಗುತ್ತಿಲ್ಲ. ಈಗಾಗಲೇ ಕಂದಾಯ ಇಲಾಖೆ ಜತೆ ಮಾತುಕತೆ ನಡೆಸಲಾಗಿದೆ. ಶಾಲೆ ಹೆಸರಿಗೆ ಶೀಘ್ರ ಖಾತೆ ಮಾಡಿಸಲಾಗುವುದು. ಮೂರು ತಿಂಗಳ ಒಳಗೆ ರಾಜ್ಯದ ಎಲ್ಲ ಶಾಲೆಗಳ ಆಸ್ತಿ ಸಂರಕ್ಷಣೆ ಮಾಡಲಾಗುವುದು ಎಂದರು.

ಪ್ರಮುಖ ಸುದ್ದಿ :-   ಯಲ್ಲಾಪುರ | ಅರೆಬೈಲ್‌ ಘಟ್ಟದ ಪ್ರಪಾತದ ಬಳಿ ಖಾಸಗಿ ಬಸ್ ಪಲ್ಟಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement