ಶಿರಾ ಬಳಿ ರಸ್ತೆ ಅಪಘಾತ : ಮೃತಪಟ್ಟ ಆರು ಜನರ ನೇತ್ರದಾನ ಮಾಡಿದ ಕುಟುಂಬಸ್ಥರು

ತುಮಕೂರು: ಇಂದು, ಗುರುವಾರ ಬೆಳಿಗ್ಗೆ ಜಿಲ್ಲೆಯ ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಜನರ ಪೈಕಿ, 6 ಮಂದಿಯ ಕಣ್ಣುಗಳನ್ನು ದಾನ ಮಾಡಲಾಗಿದೆ. ಮೃತಪಟ್ಟವರ ಕುಟುಂಬದವರು 6 ಜನರ ನೇತ್ರದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಿರಾ ತಹಶೀಲ್ದಾರ್ ಮಮತಾ ಮಾಧ್ಯಮಗಳಿಗೆ ಹೇಳಿದ್ದಾರೆ.
ಕ್ರೂಸರ್‌ ಚಾಲಕ ಕೃಷ್ಣ, ಸುಜಾತಾ, ಪ್ರಭುಸ್ವಾಮಿ, ಸಿದ್ದಯ್ಯ ಸ್ವಾಮಿ, ನಿಂಗಣ್ಣ, ಮೀನಾಕ್ಷಿ ಎಂಬುವರ ನೇತ್ರದಾನ ಮಾಡಲಾಗಿದೆ. ಈ ಮೂಲಕ ಮೃತಪಟ್ಟವರ ಕುಟುಂಬದವರು ಸಾಮಾಜಿಕ ಕಳಕಳಿ ತೋರಿಸಿದ್ದಾರೆ. 6 ಜನರ ಕುಟುಂಬಸ್ಥರು ಸ್ವ-ಇಚ್ಛೆಯಿಂದ ಕಣ್ಣು ದಾನ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ತಹಶೀಲ್ದಾರರು ತಿಳಿಸಿದರು.
ಬೆಂಗಳೂರು ಹಾಗೂ ತುಮಕೂರಿನಲ್ಲಿ ವಿವಿಧಡೆ ಕೂಲಿ ಕೆಲಸ ಮಾಡುತ್ತಿದ್ದ ಇವರು ಕೊನೆ ಶ್ರಾವಣ ಶನಿವಾರದ ಪೂಜೆಗಾಗಿ ತಮ್ಮ ಗ್ರಾಮಗಳಿಗೆ ಬಂದು ವಾಪಸ್ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಆದರೆ, ಅಪಘಾತದಿಂದ 9 ಮಂದಿ ಮೃತಪಟ್ಟಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement