ಗುಲಾಂ ನಬಿ ಆಜಾದ್‌ಗೆ ಬೆಂಬಲ ಸೂಚಿಸಿ ಜಮ್ಮು-ಕಾಶ್ಮೀರದ ಐವರು ನಾಯಕರು ಕಾಂಗ್ರೆಸ್‌ಗೆ ರಾಜೀನಾಮೆ

ನವದೆಹಲಿ: ಗುಲಾಂ ನಬಿ ಆಜಾದ್ ಅವರಿಗೆ ಬೆಂಬಲ ಸೂಚಿಸಿ ಐವರು ಜಮ್ಮು ಮತ್ತು ಕಾಶ್ಮೀರದ ನಾಯಕರು ಮತ್ತು ಮಾಜಿ ಶಾಸಕರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಆಜಾದ್ ಅವರು ಪಕ್ಷದ ಸಮಾಲೋಚನಾ ಕಾರ್ಯವಿಧಾನವನ್ನು ನಾಶಪಡಿಸಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ದೂರಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ನಾಯಕರಾದ ಗುಲಾಂ ಮೊಹಮ್ಮದ್ ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ, ಚೌಧರಿ ಅಕ್ರಂ ಮೊಹಮ್ಮದ್ ಮತ್ತು ಸಲ್ಮಾನ್ ನಿಜಾಮಿ ಅವರು ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಸಾಂಸ್ಥಿಕ ಚುನಾವಣೆಗೆ ಮುನ್ನ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ನಾಯಕತ್ವವು “ಆಂತರಿಕ ಸಮೀಕ್ಷೆಯ ಹೆಸರಿನಲ್ಲಿ ಪಕ್ಷಕ್ಕೆ “ವಂಚನೆ” ಎಸಗುತ್ತಿದೆ ಎಂದು ಆರೋಪಿಸಿದರು.
ತಮ್ಮ ಕುಟುಕು ಪತ್ರದಲ್ಲಿ ರಾಹುಲ್ ಗಾಂಧಿಯನ್ನು ಹೆಸರಿಸಿರುವ ಆಜಾದ್, “ರಿಮೋಟ್ ಕಂಟ್ರೋಲ್ ಮಾಡೆಲ್” ಕಾಂಗ್ರೆಸ್‌ನ ಸಾಂಸ್ಥಿಕ ಸಮಗ್ರತೆಯನ್ನು ಕೆಡವಿದೆ ಮತ್ತು ನಿರ್ಧಾರಗಳನ್ನು ರಾಹುಲ್ ಗಾಂಧಿ ಅಥವಾ ಭದ್ರತಾ ಸಿಬ್ಬಂದಿ ಮತ್ತು ಪಿಎಗಳು ತೆಗೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ.
ಎಲ್ಲಾ ಹಿರಿಯ ಮತ್ತು ಅನುಭವಿ ನಾಯಕರನ್ನು ಮೂಲಗೆ ಸರಿಸಲಾಯಿತು ಮತ್ತು ಅನನುಭವಿ ಭಟ್ಟಂಗಿಗಳ ಹೊಸ ಕೂಟವು ಪಕ್ಷದ ವ್ಯವಹಾರಗಳನ್ನು ನಡೆಸಲು ಪ್ರಾರಂಭಿಸಿತು” ಎಂದು ಅವರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement