ಮುರುಘಾ ಶರಣರ ಮೇಲೆ ಸುಳ್ಳು ಆರೋಪ, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ: ಯಡಿಯೂರಪ್ಪ

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಸುಳ್ಳು ಆರೋಪದ ಪ್ರಕರಣ ದಾಖಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುರುಘಾ ಮಠದ ಬಗ್ಗೆ ಗೊತ್ತಿರುವ ಯಾರೂ ಕೂಡ ಮುರುಘಾ ಶರಣರ ಬಗ್ಗೆ ಇಂತಹ ಆರೋಪ ಮಾಡಲು ಸಾಧ್ಯವಿಲ್ಲ. ವ್ಯವಸ್ಥಿತ ಷಡ್ಯಂತ್ರ ಎಂಬಂತೆ ಕಾಣುತ್ತಿದೆ ಎಂದು ಹೇಳಿದರು.

ಶ್ರೀಗಳು ಹಲವು ವರ್ಷಗಳಿಂದ ಶಿಕ್ಷಣ, ಆರೋಗ್ಯ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಡವರ ಏಳ್ಗೆಗೆ ಅನೇಕ ಕಾರ್ಯಗಳನ್ನು ಕೈಗೊಂಡು ಎಲ್ಲರ ಪ್ರೀತಿಪಾತ್ರಕ್ಕೆ ಪಾತ್ರವಾಗಿದ್ದಾರೆ. ಬಾಲಕಿಯರು ಮಾಡಿರುವ ಆರೋಪದಲ್ಲಿ ಎಳ್ಳಷ್ಟು ಸತ್ಯವಿಲ್ಲ ಎಂಬುದು ನನ್ನ ಭಾವನೆ ಎಂದು ಹೇಳಿದರು.
ಈ ಪ್ರಕರಣದಲ್ಲಿ ಶ್ರೀಗಳು ಯಾವುದೇ ರೀತಿಯ ತಪನ್ನೂ ಮಾಡಿಲ್ಲ ಎಂದು ನನಗೆ ಈಗಲೂ ಕೂಡ ವಿಶ್ವಾಸವಿದೆ. ಅವರು ಆರೋಪದಿಂದ ಮುಕ್ತರಾಗಿ ಬರಲಿದ್ದಾರೆ ಎಂಬ ಭರವಸೆ ಇದೆ ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement