ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಮಾಜಿ ಶಾಸಕ ಬಸವರಾಜನ್‌ ವಜಾ

ಚಿತ್ರದುರ್ಗ: ಷರತ್ತುಗಳನ್ನು ಉಲ್ಲಂಘಿಸಿ ಮಠ ಹಾಗೂ ಪೀಠಾಧಿಪತಿಗಳ ಘನತೆ, ಗೌರವಕ್ಕೆ ಧಕ್ಕೆ ತರಲು ಸಂಚು ರೂಪಿಸಿದ ಆರೋಪದ ಮೇರೆಗೆ ಮಾಜಿ ಶಾಸಕ ಎಸ್‌.ಕೆ.ಬಸವರಾಜನ್‌ ಅವರನ್ನು ಮುರುಘಾ ಮಠದ ಆಡಳಿತಾಧಿಕಾರಿ ಮತ್ತು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಲಾಗಿದೆ.
ಲಿಂಗಾಯತ-ವೀರಶೈವ ಮತ್ತು ವಿವಿಧ ಸಮಾಜಗಳ ಮುಖಂಡರ ಒತ್ತಾಸೆಯಂತೆ ಬಸವರಾಜನ್‌ ಅವರನ್ನು ಮಾರ್ಚ್‌ 7ರಂದು ಪುನರ್‌ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಮಠ ಮತ್ತು ಬಸವರಾಜನ್‌ ಅವರ ನಡುವಿನ ವ್ಯಾಜ್ಯಗಳನ್ನು ಮುಕ್ತಾಯಗೊಳಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿತ್ತು. ಆದರೆ, ಅವರ ನಡೆಗಳು ಅನುಮಾಸ್ಪದವಾಗಿದ್ದವು’ ಎಂದು ಮಠ ಆರೋಪಿಸಿದೆ.

ಬಸವರಾಜನ್‌ ಅವರು ಆಡಳಿತಾತ್ಮಕವಾಗಿ ಯಾವುದೇ ರೀತಿಯ ಸಹಕಾರ ನೀಡುತ್ತಿರಲಿಲ್ಲ. ಮಠದ ಪರವಾಗಿ ಬಸವರಾಜನ್ ಹೆಸರಿನಲ್ಲಿ ಖರೀದಿಸಿದ ಆಸ್ತಿಗಳನ್ನು ಅವರು ಹಿಂದಿರುಗಿಸಿರಲಿಲ್ಲ. ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಅಮೆರಿಕ ಮತ್ತು ಮಾರಿಷಿಯಸ್ ಪ್ರವಾಸಗಳಲ್ಲಿರುವಾಗ ಮಠದ ವಿರೋಧಿ ಕೃತ್ಯದಲ್ಲಿ ತೊಡಗಿದರು. ಹಲವು ಬಾರಿ ಸೂಚನೆ ನೀಡಿದರೂ ತಪ್ಪು ಸರಿಪಡಿಸಿಕೊಳ್ಳಲಿಲ್ಲ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2007ರಲ್ಲಿಯೂ ಬಸವರಾಜನ್‌ ಅವರನ್ನು ಈ ಹುದ್ದೆಯಿಂದ ಕಿತ್ತುಹಾಕಲಾಗಿತ್ತು. ಆದರೆ ಕಳೆದ ಮಾರ್ಚ್‌ 7ರಂದು ಈ ಹುದ್ದೆಗೆ ಅವರು ಪುನಃ ನೇಮಕಗೊಂಡಿದ್ದರು. ಈ ವೇಳೆ ಬಸವರಾಜನ್‌ ಅವರಿಗೆ ಷರತ್ತುಗಳನ್ನು ವಿಧಿಸಲಾಗಿತ್ತು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement