ಮಂಗಳೂರು: ನಾಳೆ 3,800 ಕೋಟಿ ರೂ.ವೆಚ್ಚದ 8 ಯೋಜನೆಗಳ ಶಿಲಾನ್ಯಾಸ-ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ

ಮಂಗಳೂರು: ನಾಳೆ (ಸೆಪ್ಟೆಂಬರ್‌ 2) ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1:30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಎನ್ಎಂಪಿಟಿಯಲ್ಲಿ ಸಮಗ್ರ ಎಲ್‌ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚ 500 ಕೋಟಿ ರೂ.ಗಳು), ಶೇಖರಣಾ ಟ್ಯಾಂಕ್‌ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (100 ಕೋಟಿ ರೂ.ಗಳು), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (100 ಕೋಟಿ ರೂ.ಗಳು) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್‌ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (100 ಕೋಟಿ ರೂ.ಗಳು) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕುಲೈನಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.

ಪ್ರಧಾನಿ ಮೋದಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ ಕಂಟೇನರ್‌ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ (281 ಕೋಟಿ ರೂ.ಗಳು ), ಬಿಎಸ್ VI ಉನ್ನತೀಕರಣ ಯೋಜನೆ (1829 ಕೋಟಿ ರೂ.ಗಳು ), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (677 ಕೋಟಿ ರೂ.ಗಳು ) ಸೇರಿವೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ಬಂದರು, ಹಡಗು ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಹಾಗೂ ಶಂತನು ಠಾಕೂರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement