ಮಠದ ಜಮೀನು ಮಾರಾಟ: ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ ಬೆಂಗಳೂರಿನ ನ್ಯಾಯಾಲಯ

ಬೆಂಗಳೂರು : ಬೆಂಗಳೂರು ನಗರದ ಕೆಂಗೇರಿ ಹೋಬಳಿಯ ಸೂಲಿಕೆರೆ ಗ್ರಾಮದಲ್ಲಿ ಮುರುಘಾ ಮಠಕ್ಕೆ ಸೇರಿದ 7 ಎಕರೆ ಜಮೀನನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವ ಮೂಲಕ ಮಠಕ್ಕೆ ಕೊಟ್ಯಂತರ ರೂ. ನಷ್ಟ ಮತ್ತು ಭಕ್ತರಿಗೆ ನಂಬಿಕೆ ದ್ರೋಹ ಮಾಡಿರುವ ಆರೋಪದಲ್ಲಿ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ … Continued

ಹೊಸ ಉದ್ಯೋಗ ಪಡೆಯಲು ಸುಲಭವಾಗಲು1 ಕೋಟಿಗೂ ಹೆಚ್ಚು ಮಕ್ಕಳಿಗೆ ಉಚಿತವಾಗಿ ಕಂಪ್ಯೂಟರ್ ಸೈನ್ಸ್‌ ಕಲಿಸಲಿದೆ ಗೂಗಲ್

ಆಲ್ಫಾಬೆಟ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಅವರು 1.1 ಕೋಟಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೈನ್ಸ್ ಶಿಕ್ಷಣವನ್ನು ಒದಗಿಸಲು $ 20 ಮಿಲಿಯನ್ ಅನುದಾನವನ್ನು ಘೋಷಿಸಿದ್ದಾರೆ. ” ಪ್ರಮುಖ ನಗರ ಕೇಂದ್ರಗಳು ಮತ್ತು ಗ್ರಾಮೀಣ ಸಮುದಾಯಗಳಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ತಲುಪುವ ರಾಷ್ಟ್ರೀಯ ಮತ್ತು ಸ್ಥಳೀಯ ಸಂಸ್ಥೆಗಳನ್ನು ಬೆಂಬಲಿಸಲು ನಾವು ಗಮನಹರಿಸುತ್ತೇವೆ ಮತ್ತು ಸರ್ಕಾರಗಳು ಮತ್ತು ಶಿಕ್ಷಕರು … Continued

ಟ್ವಿಟರ್ ದೇಶದಲ್ಲಿ ಬಿಸಿನೆಸ್‌ ಮಾಡಬಹುದು, ಆದರೆ ಈ ದೇಶದ ಕಾನೂನು ಪಾಲಿಸಬೇಕು: ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಕೇಂದ್ರದ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು ಹೊರಡಿಸಿರುವ ಟ್ವಿಟರ್‌ ಖಾತೆಗಳ ನಿರ್ಬಂಧ ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿ ಕೇಂದ್ರ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ದೇಶದಲ್ಲಿ ಬಿಸಿನೆಸ್ ಮಾಡಬಹುದು. ಆದರೆ ಈ ನೆಲದ ಕಾನೂನನ್ನು ಅದು ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ಶುಕ್ರವಾರ ಕರ್ನಾಟಕ ಹೈಕೋಟ್‌ಗೆ … Continued

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಬಸವಶ್ರೀ ಪ್ರಶಸ್ತಿ ವಾಪಸ್‌ ಮಾಡಿದ ಪತ್ರಕರ್ತ ಪಿ.ಸಾಯಿನಾಥ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಶರಣರು ಪ್ರದಾನ ಮಾಡಿದ ಬಸವಶ್ರೀ ಪ್ರಶಸ್ತಿಯನ್ನು   ಮ್ಯಾಗಸ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪಿ.ಸಾಯಿನಾಥ್ ವಾಪಸ್‌ ಮಾಡುವುದಾಗಿ ತಿಳಿಸಿದ್ದಾರೆ. ಡಾ.ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಬಂಧಿತರಾಗಿರುವ ಹಿನ್ನೆಲೆ ಪ್ರಶಸ್ತಿಯನ್ನು ಹಿಂದಿರುಗಿಸಲು ತೀರ್ಮಾನಿಸಿರುವುದಾಗಿ ಸಾಯಿನಾಥ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.ಪ್ರತಿವರ್ಷ ಚಿತ್ರದುರ್ಗದ ಮುರುಘಾ ಮಠದದಿಂದ … Continued

ಮಾನವನ್ಯಾಕೆ ಇಷ್ಟು ಕ್ರೂರಿ…: ಜೆಸಿಬಿ ಸದ್ದಿಗೆ ನೂರಾರು ಗೂಡುಗಳಿದ್ದ ಬೃಹತ್‌ ಮರ ಉರುಳಿ ‘ಹಕ್ಕಿಗಳ ಮಾರಣಹೋಮ’, ಮನಕಲಕುವ ದೃಶ್ಯದ ವೀಡಿಯೊ ವೈರಲ್ | ವೀಕ್ಷಿಸಿ

ಮನೆಗಳು, ಸಾರ್ವಜನಿಕ ಆಸ್ತಿಗಳು ಮತ್ತು ಸರ್ಕಾರಿ ಕಟ್ಟಡಗಳ ನಿರ್ಮಾಣದಿಂದಾಗಿ ಮರಗಳ ನಾಶವಾಗುತ್ತಿದ್ದು, ಮರಗಳ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕ ಜಾಗೃತಿಯ ನಂತರವೂ ಬೇಕಾಬಿಟ್ಟಿ ಮರ ಕಡಿಯುವುದು ಮುಂದುವರಿದಿದೆ. ಇತ್ತೀಚೆಗೆ, ಮುಂದಾಲೋಚನೆಯಿಲ್ಲದೆ ಮರವೊಂದನ್ನ ಕಡಿದ ಪರಿಣಾಮ, ನೂರಾರು ಪಕ್ಷಿಗಳು ನಿರಾಶ್ರಿತವಾಗಿದ್ದು, ಅನೇಕ ಪಕ್ಷಿಗಳನ್ನು ಸಾಯಿಸಿದ ವೀಡಿಯೊವೊಂದು ಅಂತರ್ಜಾಲದಲ್ಲಿ ವೈರಲ್‌ ಆಗಿದೆ. ಸತ್ತಿದ್ದು ಹೆಚ್ಚಾಗಿ ಮರದ ಮೇಲಿನ ನೂರಾರು ಗೂಡುಗಳಲ್ಲಿದ್ದ … Continued

₹ 6 ಕೋಟಿ ಚಿನ್ನಾಭರಣ ಲೂಟಿ ಮಾಡಿದ ಆರೋಪಿಗಳ ಬಂಧನಕ್ಕೆ ಕಾರಣವಾಯ್ತು 100 ರೂ. Paytm ವಹಿವಾಟು….!

ನವದೆಹಲಿ: ಪೇಟಿಎಂ ವಹಿವಾಟಿನ ಸಹಾಯದಿಂದ ದೆಹಲಿಯ ಪಹರ್‌ಗಂಜ್ ಪ್ರದೇಶದಲ್ಲಿ ಇಬ್ಬರನ್ನು ದರೋಡೆ ಮಾಡಿದ ಆರೋಪದ ಮೇಲೆ ರಾಜಸ್ಥಾನದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಇಬ್ಬರ ಕಣ್ಣಿಗೆ ಮೆಣಸಿನ ಪುಡಿ ಎರಚಿ ಆರೋಪಿಗಳು ₹ 6 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದರು. ಆರೋಪಿಗಳನ್ನು ನಜಾಫ್‌ಗಢ ನಿವಾಸಿಗಳಾದ ನಾಗೇಶ್ ಕುಮಾರ್ (28), ಶಿವಂ (23), … Continued

ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮುರುಘಾ ಶರಣರ ಶಿಷ್ಯ

ಚಿತ್ರದುರ್ಗ: ಅಪ್ರಾಪ್ತ ವಿದ್ಯಾರ್ಥನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಗಾದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಶರಣರನ್ನು ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ನಂತರ ಬಳಿಕ ಶ್ರೀಗಳನ್ನು ವೈದ್ಯಕೀಯ ತಪಾಸಣೆಗೆಂದು ಜಿಲ್ಲಾಸ್ಪತ್ರೆಗೆ ಕರೆತಂದು ಬೇರೆಡೆ ಕೊರೆಯ್ಯಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾಗ ಶಿಷ್ಯರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. … Continued

ಕೋಲ್ಡ್‌ ಬ್ಲಡೆಡ್ ಮರ್ಡರ್‌: ಕೆಜಿಎಫ್‌ ಸಿನೆಮಾದಿಂದ ಪ್ರೇರಣೆಗೊಂಡು ಪ್ರಸಿದ್ಧಿಗಾಗಿ ಐವರನ್ನು ಕೊಂದಿದ್ದನಂತೆ 19 ವರ್ಷದ ಈ ಹುಡುಗ…!

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ನಿದ್ದೆ ಮಾಡುತ್ತಿದ್ದ ನಾಲ್ವರು ಸೆಕ್ಯೂರಿಟಿ ಗಾರ್ಡ್‌ಗಳನ್ನು ಕೊಂದಿರುವ ಶಂಕಿತ ಸರಣಿ ಹಂತಕನೊಬ್ಬ ಸೆಕ್ಯೂರಿಟಿ ಗಾರ್ಡ್‌ ಒಬ್ಬರ ಮೇಲೆ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 19 ವರ್ಷದ ಶಿವ ಪ್ರಸಾದ್ ಎಂದು ಗುರುತಿಸಲಾದ ವ್ಯಕ್ತಿ, ಬ್ಲಾಕ್‌ಬಸ್ಟರ್ ಕೆಜಿಎಫ್‌ನಿಂದ ಪ್ರೇರಿತನಾಗಿ ತಾನೂ ಗ್ಯಾಂಗ್‌ಸ್ಟರ್ ಆಗಿ ಪ್ರಸಿದ್ಧಿ ಪಡೆಯಲು ಬಯಸಿದ್ದ ಎಂದು ಹೇಳಿಕೊಂಡಿದ್ದಾನೆ ಎಂದು ಮೂಲಗಳು … Continued

3,800 ಕೋಟಿ ರೂ.ಗಳ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ, ಕರ್ನಾಟಕದಲ್ಲಿ ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿಯೇ ಟೀಕಿಸುವವರಿಗೆ ಉತ್ತರ : ಮೋದಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಇದೇವೇಳೆ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ 1,830 ಕೋಟಿ ರೂ ವೆಚ್ಚದ ಎರಡು ಯೋಜನೆಗಳನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ … Continued

ಕುಮಟಾ: ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಂಕರ ಶಾಸ್ತ್ರೀ ನಿಧನ

ಕುಮಟಾ: ನಗರದ ವಕೀಲ ಹಾಗೂ ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಂಕರ ಶಾಸ್ತ್ರೀ (52) ಅವರು ಅನಾರೋಗ್ಯದಿಂದಾಗಿ ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ನಗರದಲ್ಲಿ ಟಿವಿಎಸ್ ದ್ವಿಚಕ್ರ ವಾಹನ ಶೋ ರೂ ನಡೆಸುತ್ತಿದ್ದ ಇವರು ಕುಮಟಾ ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಮೃತ ಶಂಕರ ಶಾಸ್ತ್ರೀಯವರು ಕುಮಟಾದ ಖ್ಯಾತ ವಕೀಲರಾದ ಶ್ರೀಪಾದ ಶಾಸ್ತ್ರೀ ಅವರ … Continued