ಮುಂಬೈ: ಸೀರಂ ಇನ್ಸ್ಟಿಟ್ಯೂಟ್(SII)ನ ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮಗಳಿಂದಾಗಿ ತನ್ನ ಮಗಳು ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ಗೇಟ್ಸ್ಗೆ ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರಾದ ದಿಲೀಪ್ ಲುನಾವತ್ ಅವರು ಕೋವಿಡ್-19 ವಿರುದ್ಧ ಲಸಿಕೆಯನ್ನು ತಯಾರಿಸುವಲ್ಲಿ SII ಯ ಪ್ರಯತ್ನಗಳಿಗೆ ಗೇಟ್ಸ್ ಹಣವನ್ನು ನೀಡಿದ್ದರಿಂದ ಗೇಟ್ಸ್ ಅವರನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.
ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ತಮ್ಮ ಮಗಳು ಸ್ನೇಹಲ್ಗೆ ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಯಾವುದೇ ಅಪಾಯವನ್ನು ಉಂಟುಮಾಡುವುದಿಲ್ಲ ಎಂದು ಖಾತ್ರಿಪಡಿಸಲಾಗಿತ್ತು. ಅದಕ್ಕಾಗಿ ಅವಳು ಲಸಿಕೆ ತೆಗೆದುಕೊಂಡಿದ್ದಳು ಎಂದು ಲುನಾವತ್ ತಮ್ಮ ಮನವಿಯಲ್ಲಿ ಹೇಳಿದ್ದಾರೆ.
ಆಕೆ ಆರೋಗ್ಯ ಕಾರ್ಯಕರ್ತರ ವರ್ಗದಲ್ಲಿರುವುದರಿಂದ ಆಕೆಯ ಕಾಲೇಜಿನಲ್ಲಿ ಚುಚ್ಚುಮದ್ದು ಹಾಕಿಸಿಕೊಳ್ಳಲು ಒತ್ತಾಯಿಸಲಾಯಿತು. ಆದಾಗ್ಯೂ, ಲಸಿಕೆಯ ಅಡ್ಡ ಪರಿಣಾಮಗಳಿಂದ ಕಳೆದ ವರ್ಷ ಮಾರ್ಚ್ 1 ರಂದು ನಿಧನರಾದರು. ಹೀಗಾಗಿ 1,000 ಕೋಟಿ ಪರಿಹಾರ ನೀಡಬೇಕು ಎಂದು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ. ಎಂದು ಅರ್ಜಿದಾರರು ಹೇಳಿದ್ದಾರೆ.
ಲಸಿಕೆಯ ಅಡ್ಡ ಪರಿಣಾಮಗಳಿಂದಾಗಿ ತನ್ನ ಮಗಳ ಸಾವು ಸಂಭವಿಸಿದೆ ಎಂದು ಕಳೆದ ವರ್ಷ ಅಕ್ಟೋಬರ್ನಲ್ಲಿ ಕೇಂದ್ರದ ಪ್ರತಿಕೂಲ ಘಟನೆಗಳ (ಎಇಎಫ್ಐ) ಸಮಿತಿಯು ಕಳೆದ ವರ್ಷ ಅಕ್ಟೋಬರ್ನಲ್ಲಿ ಒಪ್ಪಿಕೊಂಡಿದೆ ಎಂದು ಲುನಾವತ್ ಅರ್ಜಿಯಲ್ಲಿ ಹೇಳಿದ್ದಾರೆ.
ಎಸ್ಐಐನಿಂದ ವಸೂಲಿ ಮಾಡಬಹುದಾದ 1,000 ಕೋಟಿ ರೂಪಾಯಿಗಳ ಪರಿಹಾರವನ್ನು ಪಾವತಿಸಲು ರಾಜ್ಯ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೇಳಿಕೊಂಡಿದ್ದಾರೆ.
ಲಸಿಕೆಗಳ ಅಡ್ಡ ಪರಿಣಾಮಗಳಿಂದ ಉಂಟಾಗುವ ಸಾವುಗಳ ಬಗ್ಗೆ ಡೇಟಾವನ್ನು ನಿಗ್ರಹಿಸಲು ಪ್ಲಾಟ್ಫಾರ್ಮ್ಗಳನ್ನು ಬಳಸುತ್ತಿರುವ ಗೂಗಲ್, ಯೂಟ್ಯೂಬ್ ಮತ್ತು ಮೆಟಾದಂತಹ ಟೆಕ್ ದೈತ್ಯರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ