ಸ್ಥಳ ಮಹಜರ್‌ ನಡೆಸಲು ಮುರುಘಾ ಶರಣರನ್ನು ಮಠಕ್ಕೆ ಕರೆತಂದ ಪೊಲೀಸರು

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಸ್ಥಳ ಮಹಜರ್‌ ನಡೆಸಲು ಮುರುಘಾ ಮಠಕ್ಕೆ ಭಾನುವಾರ ಕರೆತಂದರು.
ಪೊಲೀಸ್ ವಶದಲ್ಲಿರುವ ಆರೋಪಿ ಮುರುಘಾ ಶರಣರನ್ನು ತನಿಖಾಧಿಕಾರಿಗಳು ಶುಕ್ರವಾರ ರಾತ್ರಿಯಿಂದ ವಿಚಾರಣೆಗೆ ಒಳಪಡಿಸಿದ್ದಾರೆ.

ಭಾನುವಾರ ಬೆಳಿಗ್ಗೆ 11:45 ಮುರುಘಾ ಮಠಕ್ಕೆ ಕರೆತಂದು ಸ್ಥಖ ಮಹಜರು ನಡೆಸಿದ್ದಾರೆ. ಡಿವೈಎಸ್‌ಪಿ ಕಚೇರಿಯಿಂದ ಶರಣರನ್ನು ಮಠಕ್ಕೆ ಕರತರಲಾಯಿತು. ಹಾಗೂ ಮಠದ ಬಿಡಾರ, ಹಾಸ್ಟೆಲ್ ಗೆ ಕರೆದೊಯ್ದು ಮಹಜರು ಮಾಡಲಾಗುತ್ತಿದೆ. ಮಹಜರು ಸಂದರ್ಭದಲ್ಲಿ ಭಕ್ತರು, ಪ್ರವಾಸಿಗರ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದಾರೆ. ಮಹಜರಗೂ ಮುನ್ನ ಪೊಲೀಸರು ಮುರುಘಾ ಶ್ರೀಗೆ ಮೊದಲು ಗದ್ದುಗೆ ದರ್ಶನ ಮಾಡಿಸಿದರು. ಅಲ್ಲಿಂದ ಮುರುಘಾ ಶ್ರೀಗಳ ಮಲಗುವ ಕೊಠಡಿ, ಕೂರುತ್ತಿದ್ದ ಚೇಂಬರ್ ಹಾಗೂ ದರ್ಬಾರ್ ಹಾಲ್‌ನಲ್ಲೂ ಮಹಜರು ಮಾಡುತ್ತಿದ್ದಾರೆ. ಸೆಪ್ಟೆಂಬರ್‌ 1ರಂದು ರಾತ್ರಿ 10ಕ್ಕೆ ಮುರುಘಾ ಶರಣರನ್ನು ಬಂಧಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement