ಬೆಂಗಳೂರಲ್ಲಿ ಮಳೆ ಅನಾಹುತ: ಇಂದು ಸಂಜೆ 5 ಗಂಟೆಗೆ ಐಟಿ-ಬಿಟಿ ಕಂಪನಿಗಳ ಜೊತೆ ಸಚಿವ ಅಶ್ವತ್ಥ ನಾರಾಯಣ ಸಭೆ

ಬೆಂಗಳೂರು: ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತಲ್ಲಣಗೊಂಡಿದೆ. ನಗರದ ಅನೇಕ ಪ್ರದೇಶಗಳಲ್ಲಿ ಜನರನ್ನು ದೋಣಿ ಮೂಲಕ ರಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಐಟಿ-ಬಿಟಿ ಕಂಪನಿಗಳ ಸಂಕಷ್ಟ ಆಲಿಸಲು ಸರ್ಕಾರ ಮುಂದಾಗಿದೆ.
ಐಟಿ-ಬಿಟಿ ಕಂಪನಿಗಳು ಮಳೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಅವರು ಸಂಜೆ 5 ಗಂಟೆಗೆ ವಿವಿಧ ಸಾಫ್ಟ್‌ವೇರ್‌ ಕಂಪನಿಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು, ನಗರ ಪೊಲೀಸ್‌ ಆಯುಕ್ತರೂ ಸೇರಿದಂತೆ ಹಲವು ಇಲಾಖೆಗಳ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement