ಮೈಮೇಲೆ ರೈಲು ಹಾಯ್ದು ಹೋದರೂ ಬುದ್ಧಿ ಉಪಯೋಗಿಸಿ ಅಪಾಯದಿಂದ ಪಾರಾದ ರೈಲು ಹಳಿ ಮೇಲೆ ಬಿದ್ದ ಪ್ರಯಾಣಿಕ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರೈಲು ಬರುತ್ತಿರುವ ವೇಳೆ ಹಳಿ ದಾಟಲು ಹೋಗಿ ಜೀವಕ್ಕೆ ಕಂಟಕ ತಂದುಕೊಂಡ ಹಲವು ಘಟನೆಗಳು ನಡೆದಿದೆ. ಈಗ ರೈಲ್ವೆ ಅನಾಹುತವೊಂದರಿಂದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪವಾಡ ಸದೃಶವಾಗಿ ಪಾರಾದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲಿನ ಪ್ಲಾಟ್‌ಫಾರ್ಮ್‌ ಹಾಗೂ ರೈಲು ಹಳಿಯ ನಡುವಿನ ಜಾಗದಲ್ಲಿ ವ್ಯಕ್ತಿಯೊಬ್ಬ ಬಿದ್ದಿದ್ದಾನೆ. ಅಷ್ಟರಲ್ಲೇ ರೈಲೊಂದು ಹಾಯ್ದು ಹೋಗಿದೆ. ಆತ … Continued

ಯಡಿಯೂರಪ್ಪ, ಕುಟುಂಬದ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮರುಪರಿಗಣಿಸಲು ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ಮುಖ್ಯಮಂತ್ರಿಯಾಗಿದ್ದ ವೇಳೆ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್‌ ಕಂಪೆನಿಯಿಂದ ಲಂಚ … Continued

ದಶಕದ ಹಿಂದಿನ ಗೋಮಾಂಸ ಹೇಳಿಕೆಗೆ ಪ್ರತಿಭಟನೆ ಭುಗಿಲೆದ್ದ ನಂತರ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ದರ್ಶನಕ್ಕೆ ಬಂದು ವಾಪಸ್‌ ಹೋದ ರಣಬೀರ್ ಕಪೂರ್ -ಆಲಿಯಾ ಭಟ್ ದಂಪತಿ

ನವದೆಹಲಿ: ತಮ್ಮ ಮುಂಬರುವ ಚಿತ್ರ ಬ್ರಹ್ಮಾಸ್ತ್ರದ ವಿರುದ್ಧ ಹಿಂದೂ ಸಂಘಟನೆಗಳು ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಹೊರಗೆ ಪ್ರತಿಭಟನೆ ನಡೆಸಿದ ನಂತರ ಬಾಲಿವುಡ್‌ ನಟರಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರಿಗೆ ಸಂಧ್ಯಾ ಆರತಿಗಾಗಿ ಮಹಾಕಾಳೇಶ್ವರ ದೇವಸ್ಥಾನವನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಆದಾಗ್ಯೂ, ನಿರ್ದೇಶಕ ಅಯನ್ ಮುಖರ್ಜಿ ದೇವಾಲಯದ ಒಳಗಿನ ಗರ್ಭಗುಡಿಯನ್ನು ಪ್ರವೇಶಿಸಿದರು; ಬ್ರಹ್ಮಾಸ್ತ್ರ ಫ್ಯಾಂಟಸಿ ಚಲನಚಿತ್ರವು … Continued

ಬೆಂಗಳೂರಲ್ಲಿ ಮಳೆ ಅನಾಹುತ: ಇಂದು ಸಂಜೆ 5 ಗಂಟೆಗೆ ಐಟಿ-ಬಿಟಿ ಕಂಪನಿಗಳ ಜೊತೆ ಸಚಿವ ಅಶ್ವತ್ಥ ನಾರಾಯಣ ಸಭೆ

ಬೆಂಗಳೂರು: ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತಲ್ಲಣಗೊಂಡಿದೆ. ನಗರದ ಅನೇಕ ಪ್ರದೇಶಗಳಲ್ಲಿ ಜನರನ್ನು ದೋಣಿ ಮೂಲಕ ರಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಐಟಿ-ಬಿಟಿ ಕಂಪನಿಗಳ ಸಂಕಷ್ಟ ಆಲಿಸಲು ಸರ್ಕಾರ ಮುಂದಾಗಿದೆ. ಐಟಿ-ಬಿಟಿ ಕಂಪನಿಗಳು ಮಳೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಅವರು ಸಂಜೆ 5 ಗಂಟೆಗೆ ವಿವಿಧ ಸಾಫ್ಟ್‌ವೇರ್‌ ಕಂಪನಿಗಳ ಮುಖ್ಯಸ್ಥರು … Continued

ಹೀರೋ ತಾಯಿ..: ಹುಲಿಯೊಂದಿಗೆ ಹೋರಾಡಿ ಅಂಬೆಗಾಲಿಡುವ ತನ್ನ ಮಗನನ್ನು ಅದರ ದವಡೆಯಿಂದ ರಕ್ಷಿಸಿದ ಧೈರ್ಯಶಾಲಿ ಮಹಿಳೆ…!

ಜಬಲ್‌ಪುರ: ಮಧ್ಯಪ್ರದೇಶದ ಹಳ್ಳಿಯೊಂದರ 25 ವರ್ಷದ ಮಹಿಳೆಯೊಬ್ಬರು ಅಪರೂಪದ ಧೈರ್ಯ ಸಾಹಸ ಪ್ರದರ್ಶಿಸಿ ಹುಲಿಯ ದವಡೆಯಿಂದ ತನ್ನ 15 ತಿಂಗಳ ಮಗನನ್ನು ರಕ್ಷಿಸಿದ್ದಾರೆ. ಮಧ್ಯಪ್ರದೇಶದ ಜಬಲ್‌ಪುರದ ಬಾಂಧವ್‌ಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಹುಲಿಯ ವಿರುದ್ಧ ಹೋರಾಡಿ ತನ್ನ ಮಗನನ್ನು ಹುಲಿಯ ಬಾಯಯಿಂದ ಕಾಪಾಡಿದ್ದಾರೆ. ಈ ವಾರದ ಆರಂಭದಲ್ಲಿ ರೊಹನಿಯಾ ಗ್ರಾಮದಲ್ಲಿ … Continued

ಉಮೇಶ ಕತ್ತಿ ನಿಧನಕ್ಕೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಬೆಂಗಳೂರು: ಅರಣ್ಯ ಸಚಿವ ಉಮೇಶ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ. Shri … Continued

ಕಲ್ಲಿದ್ದಲು ಹಗರಣ: ಪಶ್ಚಿಮ ಬಂಗಾಳದ ಕಾನೂನು ಸಚಿವರ ಮನೆಗಳ ಮೇಲೆ ಸಿಬಿಐ ದಾಳಿ

ನವದೆಹಲಿ: ಕಲ್ಲಿದ್ದಲು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು, ಬುಧವಾರ ಪಶ್ಚಿಮ ಬಂಗಾಳದ ಸಚಿವ ಮೊಲೊಯ್ ಘಾಟಕ್ ಅವರ ನಿವಾಸದಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಪಶ್ಚಿಮ ಬರ್ಧಮಾನ್ ಜಿಲ್ಲೆಯ ಅಸನ್ಸೋಲ್‌ನಲ್ಲಿರುವ ಸಚಿವ ಘಾಟಕ್‌ ಅವರ ಮೂರು ಮನೆಗಳು ಮತ್ತು ಕೋಲ್ಕತ್ತಾದ ಲೇಕ್ ಗಾರ್ಡನ್ಸ್ ಪ್ರದೇಶದಲ್ಲಿ ಒಂದು ಮನೆ … Continued

ವಕೀಲೆ, ಭಾರತೀಯ ಮೂಲದ ಸುಯೆಲ್ಲಾ ಬ್ರಾವರ್‌ಮನ್‌ ಬ್ರಿಟನ್‌ನ ನೂತನ ಗೃಹ ಕಾರ್ಯದರ್ಶಿ

ಲಂಡನ್‌: ಬ್ರಿಟಿಷ್ ಪ್ರಧಾನಿ ಲಿಜ್ ಟ್ರಸ್ ಅವರು ಮಂಗಳವಾರ ಭಾರತೀಯ ಮೂಲದ ಬ್ಯಾರಿಸ್ಟರ್ ಸುಯೆಲ್ಲಾ ಬ್ರಾವರ್‌ಮನ್ ಅವರನ್ನು ಬ್ರಿಟನ್‌ನ ಹೊಸ ಗೃಹ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ . ಮತ್ತು ಅವರು ಭಾರತೀಯ ಮೂಲದ ಪ್ರೀತಿ ಪಟೇಲ್ ಅವರ ಸಹೋದ್ಯೋಗಿ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. 42 ವರ್ಷದ ಸುಯೆಲ್ಲಾ ಬ್ರಾವರ್‌ಮನ್ ಅವರು ಆಗ್ನೇಯ ಇಂಗ್ಲೆಂಡ್‌ನ ಫರೆಹ್ಯಾಮ್‌ನ ಕನ್ಸರ್ವೇಟಿವ್ ಪಕ್ಷದ … Continued

ಸಚಿವ ಉಮೇಶ ಕತ್ತಿ ನಿಧನ: ಇಂದು ಬೆಳಗಾವಿ ಜಿಲ್ಲೆ ಶಾಲಾ -ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ, ಸಂಜೆ 5 ಗಂಟೆಗೆ ಅಂತ್ಯಸಂಸ್ಕಾರ

ಬೆಂಗಳೂರು :ಸಚಿವ ಉಮೇಶ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ- ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕತ್ತಿ ಉಮೇಶ್ ಕತ್ತಿ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಮೇಶ ಕತ್ತಿ ಅವರ … Continued

ಸಚಿವ ಉಮೇಶ ಕತ್ತಿ ಇನ್ನಿಲ್ಲ : ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನ

ಬೆಂಗಳೂರು: ಸಚಿವ ಉಮೇಶ  ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ಮಂಗಳವಾರ ರಾತ್ರಿ ನಗರದ ಡಾಲರ್ಸ್‌ ಕಾಲೋನಿಯ ನಿವಾಸದಲ್ಲಿ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್‌ ಕತ್ತಿ ಮೃತಪಟ್ಟಿದ್ದಾರೆ. ಉಮೇಶ್‌ ಕತ್ತಿ ಅವರ ಅಗಲಿಕೆಯ ಸುದ್ದಿ ಕೇಳಿ ಅವರ ಕುಟುಂಬಸ್ಥರು … Continued