ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪುನರ್‌ ಸ್ಥಾಪನೆ ಸಾಧ್ಯವಾಗದ ಮಾತು, ಚುನಾವಣಾ ಲಾಭಕ್ಕಾಗಿ ಜನರ ದಾರಿ ತಪ್ಪಿಸುವುದಿಲ್ಲ: ಗುಲಾಂ ನಬಿ ಆಜಾದ್

ಶ್ರೀನಗರ: ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾಗಿರುವ ಕಾಂಗ್ರೆಸ್‌ನ ಮಾಜಿ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಅವರು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ವಾಯತ್ತತೆಯನ್ನು ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಎರಡು ವರ್ಷಗಳ ಹಿಂದೆ ರದ್ದುಗೊಳಿಸಿದ್ದು, ಇದನ್ನು ಮತ್ತೆ ಸ್ಥಾಪನೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು 370ನೇ ವಿಧಿಯ ವಿಷಯದ ಬಗ್ಗೆ ಜನರನ್ನು ದಾರಿ ತಪ್ಪಿಸುವುದಿಲ್ಲ ಎಂದು ಹೇಳಿದ್ದಾರೆ. ಏಕೆಂದರೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತ ಹೊಂದಿರುವ ಸರ್ಕಾರ ಮಾತ್ರ ನಿಬಂಧನೆಯನ್ನು ಮರುಸ್ಥಾಪಿಸಬಹುದು. ಸದ್ಯದ ಪರಿಸ್ಥಿತಿಯಲ್ಲಿ ಅದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕಳೆದ ತಿಂಗಳು ಕಾಂಗ್ರೆಸ್ ತೊರೆದ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಮೊದಲ ರ್ಯಾಲಿಯಲ್ಲಿ ಮಾತನಾಡಿದ ಆಜಾದ್, “ಆಜಾದ್‌ಗೆ ಏನು ಮಾಡಬಹುದು ಮತ್ತು ಏನು ಮಾಡಬಾರದು ಎಂದು ತಿಳಿದಿದೆ. ಸಂವಿಧಾನದ 370ನೇ ವಿಧಿಯನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ಸ್ಥಾಪಿಸುವುದಾಗಿ ಭರವಸೆ ನೀಡುವ ಮೂಲಕ ಪ್ರಾದೇಶಿಕ ಪಕ್ಷಗಳು ಜನರನ್ನು ತಪ್ಪುದಾರಿಗೆ ಎಳೆಯುತ್ತಿವೆ ಎಂದು ಆರೋಪಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ನಾನು ಅಥವಾ ಕಾಂಗ್ರೆಸ್ ಪಕ್ಷ ಅಥವಾ ಮೂರು ಪ್ರಾದೇಶಿಕ ಪಕ್ಷಗಳಾದ ಟಿಎಂಸಿ ಅಥವಾ ಡಿಎಂಕೆ ಅಥವಾ ಎನ್‌ಸಿಪಿ ಆರ್ಟಿಕಲ್ 370 ಅನ್ನುಮರಳಿ ಸ್ಥಾಪಿಸಲು ಸಾಧ್ಯವಿಲ್ಲ. ಯಾಕೆಂದರೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತ ಹೊಂದಿರುವ ಸರ್ಕಾರ ಮಾತ್ರ ಅದನ್ನು ಪುನಃ ಸ್ಥಾಪಿಸಬಹುದು, ಆದರೆ ಸದ್ಯದ ಪರಿಸ್ಥಿತಿಯಲ್ಲಿ ಯಾವ ಪಕ್ಷಗಳೂ ಅಷ್ಟೊಂದು ಬಲ ಹೊಂದಿಲ್ಲ. ಹೀಗಾಗಿ ನಾನು ಸುಳ್ಳು ಭರವಸೆ ನೀಡಿ ಈ ವಿಚಾರದಲ್ಲಿ ನಿಮ್ಮನ್ನು ತಪ್ಪು ದಾರಿಗೆ ಎಳೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.
ಉತ್ತರ ಕಾಶ್ಮೀರದ ಡಾಕ್ ಬಂಗಲೆ-ಬಾರಾಮುಲ್ಲಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, “ಕೆಲವರು ನಾನು 370 ನೇ ವಿಧಿಯ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಚುನಾವಣಾ ಲಾಭಕ್ಕಾಗಿ ಜನರನ್ನು ನಾನು ಮೂರ್ಖರನ್ನಾಗಿ ಮಾಡುವುದಿಲ್ಲ. ನಾನು ನಿಮ್ಮನ್ನು ದಾರಿ ತಪ್ಪಿಸುವುದಿಲ್ಲ. ನಾನು ಯಾವುದೇ ಸಾಧ್ಯವಿಲ್ಲದ ಘೋಷಣೆಗಳನ್ನು ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ ಗೊಂಡಾದ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ನಿವಾಸದಲ್ಲಿ ದೆಹಲಿ ಪೊಲೀಸರು:12 ಜನರ ಹೇಳಿಕೆ ದಾಖಲು

ಪ್ರತಿ ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷದ ಸೋಲಿನೊಂದಿಗೆ, ರಾಜ್ಯಸಭೆಯಲ್ಲಿ ಅದರ ಬಲವು ಕಡಿಮೆಯಾಗುತ್ತಿದೆ… ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 350 ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯಬಹುದೆಂದು ನಾನು ಭಾವಿಸುವುದಿಲ್ಲ” ಎಂದು ಅವರು ಹೇಳಿದರು. ನಾನು ಇದನ್ನು ಎಲ್ಲಿಂದ ಪಡೆಯಬಹುದು? ಹೀಗಾಗಿ ಆಗದ ಭರವಸೆ ನೀಡಿ ನಾನೇಕೆ ಜನರನ್ನು ದಾರಿ ತಪ್ಪಿಸಬೇಕು ಎಂದು ಆಜಾದ್ ಹೇಳಿದರು.

ಕಳೆದ ತಿಂಗಳು ಕಾಂಗ್ರೆಸ್ ಜೊತೆಗಿನ ತನ್ನ ಐದು ದಶಕಗಳ ಹಳೆಯ ಸಂಬಂಧವನ್ನು ಕೊನೆಗೊಳಿಸಿದ ಆಜಾದ್, 10 ದಿನಗಳಲ್ಲಿ “ಆಜಾದ್” ಅವರ ಸಿದ್ಧಾಂತವಾಗಿರುವ ತನ್ನ ಹೊಸ ರಾಜಕೀಯ ಪಕ್ಷದ ರಚನೆಯನ್ನು ಘೋಷಿಸುವುದಾಗಿ ಹೇಳಿದರು.
ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಆಜಾದ್, ತಮ್ಮ ಪಕ್ಷವು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು, ಅದರ ಜನರಿಗೆ ಉದ್ಯೋಗ ಮತ್ತು ಭೂಮಿಗೆ ವಿಶೇಷ ಹಕ್ಕುಗಳನ್ನು ನೀಡಿ ಮತ್ತು ಅಭಿವೃದ್ಧಿಯನ್ನು ತರಲು ಗಮನಹರಿಸುತ್ತದೆ ಎಂದು ಹೇಳಿದರು.
ಆರ್ಟಿಕಲ್ 370 ರದ್ದತಿಯ ಪರವಾಗಿ ಆಜಾದ್ ಮತ ಚಲಾಯಿಸಿದ್ದಾರೆ ಎಂಬ ಅಲ್ತಾಫ್ ಬುಖಾರಿ ಅವರ ಆರೋಪವನ್ನು ಉಲ್ಲೇಖಿಸಿದ ಅವರು, ಸಂಸತ್ತು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಬುಖಾರಿ ಮೊದಲು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು. 370 ನೇ ವಿಧಿಯನ್ನು ರದ್ದುಗೊಳಿಸಲು ಗೃಹ ಸಚಿವಾಲಯ ತಂದ ಮಸೂದೆಯ ವಿರುದ್ಧ ನಾನು ಮತ ಚಲಾಯಿಸಿದ್ದೇನೆ ಎಂದು ಆಜಾದ್ ಹೇಳಿದರು.

ಇಂದಿನ ಪ್ರಮುಖ ಸುದ್ದಿ :-   ಅಧಿಕೃತವಾಗಿ ಒಡಿಶಾ ರೈಲು ಅಪಘಾತದ ತನಿಖೆ ವಹಿಸಿಕೊಂಡ ಸಿಬಿಐ : ವಿಧ್ವಂಸಕ ಕೃತ್ಯದ ಸುಳಿವು ನೀಡಿದ ರೈಲ್ವೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement