ಗಣೇಶ ಮೂರ್ತಿ ವಿಸರ್ಜನೆ ವೇಳೆ ಯುವಕನ ಹತ್ಯೆ: ನಾಲ್ವರ ಬಂಧನ

ಬೆಳಗಾವಿ : ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಯುವಕನನ್ನು  ಕೊಲೆ ಮಾಡಿರುವ ಘಟನೆ ನಡೆದಿದೆ.
ಅರ್ಜುನಗೌಡ ಪಾಟೀಲ (20) ಎಂಬಾತನನ್ನುಕೊಲೆ ಮಾಡಲಾಗಿದೆ. ಕೊಲೆ ಮಾಡಿ ಪಕ್ಕದ ಊರಿನಲ್ಲಿ ಅಡಗಿ ಕುಳಿತಿದ್ದ ಉದಯ್ ಭನದ್ರೋಲಿ (21), ಸುಭಾಷ್ ಸೋಲನ್ನವರ್ (21), ವಿಠ್ಠಲ ಮೀಸಿ (20),ಓರ್ವ ಅಪ್ರಾಪ್ತ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತನನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಗಳಿಹಾಳ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ಹೋದಾಗ ಒಂದು ಗುಂಪು ಮಾರಕಾಸ್ತ್ರಗಳಿಂದ ದಾಳಿ ಮಾಡಿತು. ಅರ್ಜುನಗೌಡ ಪಾಟೀಲಗೆ ಚಾಕುವಿನಿಂದ ಇರಿಯಲಾಗಿದೆ. ಚಾಕು ಎದೆಗೆ ಹೊಕ್ಕಿದ್ದರಿಂದ ಆತ ಸ್ಥಳದಲ್ಲೇ ಕುಸಿದುಬಿದ್ದ ಎನ್ನಲಾಗಿದೆ. ಆತ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದರು. ನಂತರ ಪಕ್ಕದ ಗ್ರಾಮದಲ್ಲಿ ಅಡಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಯುವಕನ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement