ಗ್ರಾಹಕರಿಗೆ ವಂಚನೆ ಪ್ರಕರಣ: ಉದ್ಯಮಿ ಸುಶೀಲ ಮಂತ್ರಿ, ಪುತ್ರನ ವಿರುದ್ಧದ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಗ್ರಾಹಕರಿಗೆ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಮಂತ್ರಿ ಡೆವಲಪರ್ಸ್‌ ಪ್ರೈವೇಟ್‌ ಲಿಮಿಟೆಡ್‌ ನಿರ್ದೇಶಕ ಸುಶೀಲ ಮಂತ್ರಿ ಮತ್ತು ಅವರ ಪುತ್ರ ಪ್ರತೀಕ ಮಂತ್ರಿ ವಿರುದ್ಧ ಅಪರಾಧ ತನಿಖಾ ದಳ (ಸಿಐಡಿ) ನಡೆಸುತ್ತಿರುವ ಎಲ್ಲಾ ಪ್ರಕ್ರಿಯೆಗೆ ಬುಧವಾರ ಹೈಕೋರ್ಟ್‌ ತಡೆ ನೀಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಸಕದಸ್ಯ ಪೀಠವು ಈ ಆದೇಶ ಮಾಡಿದೆ. ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯವು ಮಧ್ಯಂತರ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲೂ ತನಿಖೆಗೆ ಮಧ್ಯಂತರ ತಡೆ ನೀಡಲಾಗಿದೆ” ಎಂದು ಪೀಠವು ಆದೇಶದಲ್ಲಿ ಹೇಳಿದೆ.

ಮಂತ್ರಿ ಡೆವಲಪರ್ಸ್‌, ಸುಶೀಲ ಪಾಂಡುರಂಗ ಮಂತ್ರಿ ಮತ್ತು ಪ್ರತೀಕ ಮಂತ್ರಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಶ್ಯಾಮಸುಂದರ ಅವರು “ಇಂಥದ್ದೇ ಇತರೆ 14 ಪ್ರಕರಣಗಳಲ್ಲಿನ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ ನೀಡಿದೆ. ಸಿಆರ್‌ಪಿಸಿ ಸೆಕ್ಷನ್‌ 41ಎ ಅಡಿ ಔಪಚಾರಿಕವಾಗಿ ಮುಂಚಿತವಾಗಿ ನೋಟಿಸ್‌ ನೀಡದೆಯೇ ಸಿಐಡಿ ಪೊಲೀಸರು ಸೆಪ್ಟೆಂಬರ್‌ 9ರಂದು ಅರ್ಜಿದಾರರನ್ನು ಬಂಧಿಸಿದ್ದಾರೆ ಎಂದು ವಾದಿಸಿದರು.
2020ರ ಆಗಸ್ಟ್‌ 29ರಂದು ಅನಿಲ್‌ ಕುಮಾರ್‌ ಎಂಬವರು ನೀಡಿದ ದೂರನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಈ ಸಂಬಂಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 120ಬಿ, 406, 409, 420 ಜೊತೆಗೆ 34 ಹಾಗೂ ಅನಿಯಂತ್ರಿತ ಠೇವಣಿ ಯೋಜನೆ (BUDS) ಕಾಯಿದೆ ಸೆಕ್ಷನ್‌ಗಳಾದ 21, 22 ಮತ್ತು 25ರ ಅಡಿ ಪ್ರಕರಣ ಸುಶೀಲ್‌ ಮಂತ್ರಿ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement