ಯಲ್ಲಾಪುರ: ಲಾರಿ ಕಂದಕಕ್ಕೆ ಉರುಳಿ ಸ್ಥಳದಲ್ಲೇ ಇಬ್ಬರ ಸಾವು

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಾಟ್’ನ ಯು ಟರ್ನ್ ಬಳಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಇದು ಆಂಧ್ರಪ್ರದೇಶದ ಲಾರಿಯಾಗಿದ್ದು ಗ್ರಾನೈಟ್ ತುಂಬಿಕೊಂಡು ಯಲ್ಲಾಪುರ-ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ. ಈ ಘಟನೆ ಸಂಭವಿಸಿದೆ. ಲಾರಿ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ನಂತರ ಸಿಮೆಂಟ್ ಡಿವೈಡರ್ ಗೆ ಗುದ್ದಿದೆ. ನಂತರ ಮರಕ್ಕೆ ಗುದ್ದಿ ಲಾರಿ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಅಂದಾಜಿಸಲಾಗಿದೆ. ನಿಯಂತ್ರಣಕ್ಕೆ ಸಿಗದೇ 100 ಅಡಿ ಆಳದ ಕಂದಕಕ್ಕೆ ಲಾರಿ ಬಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ಚಾಲಕ, ಕ್ಲೀನರ್ ದೇಹ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement