ಸಿಬಿಐ, ಇ.ಡಿ. ದುರ್ಬಳಕೆ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೈವಾಡವಿದೆ ಎಂದು ನಾನು ನಂಬುವುದಿಲ್ಲ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಜಾರಿ ನಿರ್ದೇಶನಾಲಯ ಸೇರಿದಂತೆ ಕೇಂದ್ರೀಯ ತನಿಖಾ ಏಜೆನ್ಸಿಗಳ ದುರುಪಯೋಗದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಕೈವಾಡವಿದೆ ಎಂದು ನಾನು ಭಾವಿಸುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು, ಸೋಮವಾರ “ಮಿತಿಮೀರಿದ ಕೇಂದ್ರ ತನಿಖಾ ಸಂಸ್ಥೆಗಳ ಪಕ್ಷಪಾತದ” ವಿರುದ್ಧ ಮೇಲಿನ ನಿರ್ಣಯದ ಅಂಗೀಕಾರದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕರು ಆರೋಪಿಗಳಾಗಿರುವ ಪ್ರಕರಣಗಳನ್ನು ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿದೆ. ರಾಜ್ಯದಲ್ಲಿ ಕೇಂದ್ರೀಯ ಸಂಸ್ಥೆಗಳ ದಾಳಿ ಮಿತಿಮೀರಿದೆ, ಇದರ ಹಿಂದೆ ಪ್ರಧಾನಿ ನರೇಂದ್ರ ಮೋದಿ ಇದ್ದಾರೆ ಎಂದು ನಾನು ನಂಬುವುದಿಲ್ಲ. ಆದರೆ ಇದರ ಬಿಜೆಪಿ ನಾಯಕರ ಒಂದು ವಿಭಾಗ ಇದೆ ಎಂದು ಅವರು ದೂಷಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು, ಸೋಮವಾರ “ಮಿತಿಮೀರಿದ ಕೇಂದ್ರ ತನಿಖಾ ಸಂಸ್ಥೆಗಳ ಪಕ್ಷಪಾತದ” ವಿರುದ್ಧ ನಿರ್ಣಯವನ್ನು ಅಂಗೀಕರಿಸಿತು. ಈ ನಿರ್ಣಯವನ್ನು ಬಿಜೆಪಿ ವಿರೋಧಿಸಿತು ಆದರೆ ಅದನ್ನು ಮತ ವಿಭಜನೆಯ ಮೂಲಕ ಅಂಗೀಕರಿಸಲಾಯಿತು, ನಿರ್ಣಯದ ಪರವಾಗಿ 189 ಮತ್ತು ವಿರುದ್ಧವಾಗಿ 69 ಮತಗಳು ಬಿದ್ದವು.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

ನಿರ್ಣಯದ ಕುರಿತು ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರದ ಅಜೆಂಡಾ ಮತ್ತು ಅವರ ಪಕ್ಷದ (ಬಿಜೆಪಿ) ಹಿತಾಸಕ್ತಿಗಳು ಮಿಶ್ರಣವಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಪ್ರಧಾನಿಯನ್ನು ಒತ್ತಾಯಿಸಿದರು. ಇದೇ ಸಮಯದಲ್ಲಿ ತಮ್ಮ ಹಿತಾಸಕ್ತಿಗಳನ್ನು ಪೂರೈಸಲು ಈ ಏಜೆನ್ಸಿಗಳನ್ನು “ದುರುಪಯೋಗಪಡಿಸಿಕೊಳ್ಳಲು” ಬಿಜೆಪಿ ನಾಯಕರ ಒಂದು ವಿಭಾಗವನ್ನು ಅವರು ದೂಷಿಸಿದರು.
ಈಗಿನ ಕೇಂದ್ರ ಸರ್ಕಾರ ಸರ್ವಾಧಿಕಾರದ ರೀತಿಯಲ್ಲಿ ವರ್ತಿಸುತ್ತಿದೆ. ಈ ನಿರ್ಣಯವು ನಿರ್ದಿಷ್ಟವಾಗಿ ಯಾರ ವಿರುದ್ಧವೂ ಅಲ್ಲ, ಆದರೆ ಕೇಂದ್ರೀಯ ಸಂಸ್ಥೆಗಳ ಪಕ್ಷಪಾತದ ಕಾರ್ಯನಿರ್ವಹಣೆಯ ವಿರುದ್ಧವಾಗಿದೆ ಎಂದು ಟಿಎಂಸಿ ಮುಖ್ಯಸ್ಥರು ಹೇಳಿದರು.

ಇಂತಹ “ಸಿಬಿಐ ಮತ್ತು ಇಡಿ ವಿರುದ್ಧದ ನಿರ್ಣಯ” ವಿಧಾನಸಭೆಯ ನಿಯಮಗಳು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪಶ್ಚಿಮ ಬಂಗಾಳದ ಕಾನೂನು ಸಚಿವ ಮಲಯ್ ಘಾಟಕ್ ಅವರ ಅಸನ್ಸೋಲ್ ಮತ್ತು ಕೋಲ್ಕತ್ತಾದ ಆಸ್ತಿಗಳ ಮೇಲೆ ದಿನವಿಡೀ ದಾಳಿ ನಡೆಸಿತು.
ಕಳೆದ ತಿಂಗಳು, ಆಪಾದಿತ ಜಾನುವಾರು ಕಳ್ಳಸಾಗಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಅನುಬ್ರತಾ ಮೊಂಡಲ್ ಅವರನ್ನು ಸಿಬಿಐ ಬಂಧಿಸಿತ್ತು ಮತ್ತು ಪ್ರಸ್ತುತ ಅವರ ವಶದಲ್ಲಿದ್ದಾರೆ.

ಪ್ರಮುಖ ಸುದ್ದಿ :-   ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement