ಹುಬ್ಬಳ್ಳಿ – ಅಂಕೋಲಾ ರೈಲು ಯೋಜನೆ ಜಾರಿಗೆ ಬೆಂಬಲ : ಸಾಮಾಜಿಕ ಜಾಲತಾಣ  ಜಾಗೃತಿ ಅಭಿಯಾನಕ್ಕೆ ಚಾಲನೆ

ಅಂಕೋಲಾ : ಹುಬ್ಬಳ್ಳಿ – ಅಂಕೋಲಾ ರೈಲ್ವೇ ಹೋರಾಟ ಕ್ರಿಯಾ ಸಮಿತಿ ವತಿಯಿಂದ‌ ಹುಬ್ಬಳ್ಳಿ – ಅಂಕೋಲಾ ರೈಲು ಯೋಜನೆ ಜಾರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವ ಉದ್ದೇಶದಿಂದ ಸಾಮಾಜಿಕ ಜಾಲತಾಣ‌ ಜಾಗೃತಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಅಂಕೋಲಾ ಅರ್ಬನ್ ಬ್ಯಾಂಕಿನಲ್ಲಿ ಈ ಅಭಿಯಾನದ‌ ಪೋಸ್ಟರ್ ಅನ್ನು ಹೋರಾಟ ಸಮಿತಿ ಅಧ್ಯಕ್ಷ ರಮಾನಂದ‌ ಬಿ. ನಾಯಕ,‌ ಪುರಸಭಾಧ್ಯಕ್ಷೆ ಶಾಂತಲಾ ಅರುಣ ನಾಡಕರ್ಣಿ,‌ ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ , ಉದ್ಯಮಿಗಳ ಸಂಘಟನೆಯ ದೇವಿದಾಸ ಪ್ರಭು, ಅರ್ಬನ್ ಬ್ಯಾಂಕ್ ಅಧ್ಯಕ್ಷ‌ ಭಾಸ್ಕರ ನಾರ್ವೇಕರ್, ವಕೀಲರ ಸಂಘಟನೆಯ ನಾಗಾನಂದ ಬಂಟ ಬಿಡುಗಡೆ ಮಾಡಿದರು.
ಈ ಅಭಿಯಾನ ವಿವಿಧ ಬ್ಯಾಂಕ್, ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ನಡೆಯಲಿದೆ.

ನಿರಂತರ ಹೋರಾಟ :
ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿ ಅಧ್ಯಕ್ಷ ರಮಾನಂದ‌ ನಾಯಕ,‌ ಜಿಲ್ಲೆಯ ಜೊತೆಗೆ ಇಡೀ ರಾಜ್ಯದ ಆರ್ಥಿಕ ವಿಕಾಸಕ್ಕೆ ಪೂರಕವಾಗಿರುವ ಈ ಯೋಜನೆಗೆ ಪದೇ ಪದೇ ಅಡ್ಡಿ ಒಡ್ಡಲಾಗುತ್ತಿದ್ದು, ಇದು ನಿಲ್ಲಬೇಕು. ಯೋಜನೆಯ ಬಗ್ಗೆ ಅಭಿಪ್ರಾಯ ಸಂಗ್ರಹಣೆಗೆ ಬರಲಿರುವ ತಜ್ಞರ ಸಮಿತಿಗೆ ಎಲ್ಲರೂ ಯೋಜನಾಪರ ಅಭಿಪ್ರಾಯ ಸಲ್ಲಿಸಬೇಕು. ಸರ್ಕಾರ ಈ ಯೋಜನೆ ಬಗ್ಗೆ ಗಟ್ಟಿ ನಿಲುವು ತಳೆಯಬೇಕಿದೆ. ಎಲ್ಲ ಜನಪ್ರತಿನಿಧಿಗಳ ಸಹಕಾರ ಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲಾಗುತ್ತದೆ. ಎಲ್ಲರೂ ಇದಕ್ಕೆ ಬೆಂಬಲ ಸೂಚಿಸಬೇಕು ಎಂದು ಕೋರಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಪ್ರಾಸ್ತಾವಿಕ ಮಾತನಾಡಿದ ಸಮಿತಿಯ ಕಾರ್ಯದರ್ಶಿ ವಿಠ್ಠಲದಾಸ ಕಾಮತ್, ಈ ಯೋಜನೆಯ ಪರ ಜಾಗೃತಿಗಾಗಿ ಸಾಮಾಜಿಕ ಜಾಲತಾಣ ಅಭಿಯಾನ ಆರಂಭಿಸಲಾಗಿದ್ದು ಎಲ್ಲರೂ ಟ್ವೀಟರ್ , ಫೇಸ್ ಬುಕ್, ವಾಟ್ಸಪ್ ಮತ್ತಿತರ ಜಾಲತಾಣಗಳಲ್ಲಿ ಯೋಜನಾ ಬೆಂಬಲಿಸಿ ಪೋಸ್ಟ್ ದಾಖಲಿಸಬೇಕು ಎಂದು ಮನವಿ ಮಾಡಿದರು.
ಸಂಚಾಲಕ ಉಮೇಶ ನಾಯ್ಕ ವಂದಿಸಿದರು. ಪ್ರಮುಖರಾದ ಅರುಣ ನಾಡಕರ್ಣಿ, ಕೆ.ಎಚ್.ಗೌಡ, ಪದ್ಮನಾಭ ಪ್ರಭು, ವಿನೋದ ನಾಯಕ ಭಾಸಗೋಡ, ರವೀಂದ್ರ ಕೇಣಿ, ಸಂಜಯ ನಾಯ್ಕ, ಪುರುಶೋತ್ತಮ ನಾಯ್ಕ, ಬ್ಯಾಂಕ್ ಜನರಲ್ ಮ್ಯಾನೇಜರ್ ರವೀಂದ್ರ ವೈದ್ಯ, ಸಂಗಾತಿ ರಂಗ ಭೂಮಿಯ ಕೆ. ರಮೇಶ, ಪರ್ತಕರ್ತರ ಸಂಘದ ಅರುಣ ಶೆಟ್ಟಿ, ರಾಘು ಕಾಕರಮಠ, ನಾಗರಾಜ ಜಾಂಬಳೇಕರ್, ನಿರ್ದೇಶಕ ಉಮೇಶ ನಾಯ್ಕ, ಪುರಸಭೆ ಸದಸ್ಯ ಮಂಜುನಾಥ ನಾಯ್ಕ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement