ಅಕ್ರಮ ಹಣ ವರ್ಗಾವಣೆ: ಇ.ಡಿ. ವಿಚಾರಣೆಗೆ ಶಿವಕುಮಾರ ಹಾಜರು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಸೋಮವಾರ ಹಾಜರಾಗಿದ್ದಾರೆ.
ಡಿ.ಕೆ.ಶಿವಕುಮಾರ್ ಅವರಿಗೆ ಕಳೆದ ವಾರ ಇ.ಡಿ. ಅಧಿಕಾರಿಗಳು ಸಮನ್ಸ್ ನೀಡಿ ಸೋಮವಾರ (ಸೆಪ್ಟೆಂಬರ್‌ ೧೯) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಕುಮಾರ್​ ಭಾನುವಾರ ರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಿದ ಶಿವಕುಮಾರ, ಸೋಮವಾರ 11 ಗಂಟೆ ಸುಮಾರಿಗೆ ಇ.ಡಿ. ಕಚೇರಿಗೆ ಹಾಜರಾಗಿದ್ದಾರೆ.

ಈ ಬಗ್ಗೆ ವಿಚಾರಣೆ ಮುಗಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆಯ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ಕರ್ನಾಟಕವನ್ನೂ ಪ್ರವೇಶಿಸಲಿದೆ. ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ, ಇದರ ಮಧ್ಯೆಯೇ ಶಿವಕುಮಾರ ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ.

1 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ನಿಮ್ಮ ಕಾಮೆಂಟ್ ಬರೆಯಿರಿ

advertisement